ಮನರಂಜನೆ

ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಒಂದು ಕಾಲಕ್ಕೆ ಸಿಕ್ಕಾಪಟ್ಟೆ ವಿವಾದಕ್ಕೆ ಸಿಲುಕಿದವರು ಋಷಿ. ವಿವಾದಗಳ ಜೊತೆಗೆ ‘ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ …’ ಎಂಬ ಹಾಡು ಬರೆದು ಜನಪ್ರಿಯರೂ ಆಗಿದ್ದರು. ‘ಸೂರ್ಯ ದಿ ಗ್ರೇಟ್‍’, ‘ಕೊಟ್ಲಲ್ಲಪ್ಪೋ ಕೈ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಋಷಿ, ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವೇ ಇದ್ದರು. ಇದೀಗ ಅವರು ಹೊಸ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಋಷಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು ‘ಫ್ರಾಡ್‍ ಋಷಿ’. ಈ ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ಸಾಮಾನ್ಯವಾಗಿ ಚಿತ್ರೀಕರಣ ಪೂರ್ಣವಾದ ಮೇಲೆ‌ ಹಾಡು ಬಿಡುಗಡೆ ಮಾಡುವುದು ವಾಡಿಕೆ.‌ ಆದರೆ, ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ‌ ಆನಂತರ ಚಿತ್ರೀಕರಣ ಆರಂಭಿಸುತ್ತಿರುವುದು ಈ ಚಿತ್ರದ ವಿಶೇಷ.

‘ಫ್ರಾಡ್ ಋಷಿ ಚಿತ್ರದ ಕುರಿತು ಮಾತನಾಡುವ ಋಷಿ, ‘ಇದೊಂದು ಕಾಮಿಡಿ ಜಾನರ್‌ನ ಚಿತ್ರ. ಜೊತೆಗೆ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ನೀಡುವ ಚಿತ್ರವೂ ಹೌದು. ಚಿತ್ರದಲ್ಲಿ ಏಳು ಹಾಡುಗಳಿವೆ. ಅದರಲ್ಲಿ ನಾಲ್ಕು ಹಾಡುಗಳನ್ನು ಬಿಡುಗಡೆ ಮಾಡಿ, ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸುತ್ತೇವೆ.

ನಾನೇ ನಮ್ಮ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇನೆ. ಸಾಕಷ್ಟು ಜನ ಸ್ನೇಹಿತರು ನಿರ್ಮಾಣಕ್ಕೆ ಬೆಂಬಲ ನೀಡುತ್ತಿದ್ದಾರೆ. ನಿರ್ದೇಶನ, ಕಥೆ,‌ ಚಿತ್ರಕಥೆ, ಗೀತರಚನೆ, ಸಂಭಾಷಣೆ ಕೂಡ ನನ್ನದೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಅಭಿನಯಿಸುತ್ತಿದ್ದೇನೆ. ನಮ್ಮ ಚಿತ್ರಕ್ಕೆ ಕಥೆಯೇ ನಾಯಕ. ಚಿತ್ರದಲ್ಲಿ ಮೂವರು ನಾಯಕಿಯರು ಇರುತ್ತಾರೆ. ಅಂದುಕೊಂಡ ಹಾಗೆ ಆದರೆ ಇದೇ ಡಿಸೆಂಬರ್ ಒಳಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದರು. ‘ಫ್ರಾಡ್ ಋಷಿ’ ಚಿತ್ರಕ್ಕೆ ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಶಂಕರ್ ಛಾಯಾಗ್ರಹಣ ಹಾಗೂ ಸುರೇಶ್ ಸಂಕಲನ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago