ಮನರಂಜನೆ

‘ದೂರ ತೀರ ಯಾನ’ ಹೊರಟ ‘ನಾತಿಚರಾಮಿ’ಯ ಗೌರಿ; ಟ್ರೇಲರ್ ಬಿಡುಗಡೆ

ಕನ್ನಡದ ಮಹಿಳಾ ಪ್ರಧಾನ ಚಿತ್ರಗಳಲ್ಲಿ ಪ್ರಮುಖವಾದ ಚಿತ್ರವೆಂದರೆ ಅದು ಮಂಸೋರೆ ನಿರ್ದೇಶನದ ‘ನಾತಿಚರಾಮಿ’. ಈ ಚಿತ್ರದಲ್ಲಿ ಶ್ರುತಿ ಹರಿಹರನ್‍ ನಿರ್ವಹಿಸಿದ ಗೌರಿ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಈ ಪಾತ್ರವನ್ನು ಪುನಃ ಇನ್ನೊಂದು ಚಿತ್ರದಲ್ಲಿ ವಾಪಸ್ಸು ಕರೆದುಕೊಂಡು ಬಂದಿದ್ದಾರೆ ಮಂಸೋರೆ.

ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರವು ಜುಲೈ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ವಿಜಯ್‍ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಮಿಕ್ಕಂತೆ ಉಳಿದ ತಾರಾಬಳಗವನ್ನು ಮಂಸೋರೆ ಬಹಿರಂಗಪಡಿಸಿರಲಿಲ್ಲ. ಈಗ ಅವರು ಗೌರಿ ಪಾತ್ರವನ್ನು ಪರಿಚಯಿಸಿದ್ದಾರೆ.

‘ದೂರ ತೀರ ಯಾನ’ ಚಿತ್ರದಲ್ಲಿ ಮಂಸೋರೆ, ಗೌರಿ ಪಾತ್ರವನ್ನು ಮುಂದುವರೆಸಿದ್ದಾರೆ. ನಿರ್ದೇಶಕರು ತಮ್ಮದೇ ಚಿತ್ರದ ಜನಪ್ರಿಯ ಪಾತ್ರಗಳನ್ನು ಮತ್ತೊಂದು ಸಿನಿಮಾದಲ್ಲಿ ತರುವುದರ ಮೂಲಕ ತಮ್ಮದೇ ಆದ ಸಿನಿಮಾ ಪ್ರಪಂಚವನ್ನು ಸೃಷ್ಟಿಸುವ ಟ್ರೆಂಡ್‍ ಇತ್ತೀಚೆಗೆ ಹೆಚ್ಚಾಗುತ್ತಿದೆ. ಅಂತಹ ಪ್ರಯೋಗವನ್ನು ಮಂಸೋರೆ, ‘ದೂರ ತೀರ ಯಾನ’ ಚಿತ್ರದಲ್ಲಿ ಮಾಡುತ್ತಿದ್ದಾರೆ.

‘ದೂರ ತೀರ ಯಾನ’ ಚಿತ್ರವು ಸೆನ್ಸಾರ್ ಮಂಡಳಿಯಿಂದ ‘ಯು/ಎ’ ಪ್ರಮಾಣ ಪತ್ರ ಪಡೆದಿದ್ದು, ಬಿಡುಗಡೆಗೆ ಅಣಿಯಾಗುತ್ತಿದೆ. ಶನಿವಾರ, ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

‘ದೂರ ತೀರ ಯಾನ’ ಚಿತ್ರವನ್ನು ಡಿ ಕ್ರಿಯೇಷನ್ಸ್ ಬ್ಯಾನರ್‍ನಡಿ ದೇವರಾಜ್‍ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಮಂಸೋರೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಬಕ್ಕೇಶ್‍ ಸಂಗೀತ ಮತ್ತು ಶೇಖರ್ ಚಂದ್ರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ಶರತ್‍ ಲೋಹಿತಾಶ್ವ, ಸುಧಾ ಬೆಳವಾಡಿ, ಅರುಣ್‍ ಸಾಗರ್‍, ಶ್ರುತಿ ಹರಿಹರನ್‍, ಸತೀಶ್‍ ಚಂದ್ರ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago