ಮನರಂಜನೆ

National Awards: ಕಾಂತಾರ ಸ್ಟಾರ್‌ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ; KGF-2ಅತ್ಯುತ್ತಮ ಕನ್ನಡ ಚಿತ್ರ

ನವದೆಹಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರದ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.

ಇನ್ನು ಕೆಜಿಎಫ್ 2 ಚಲನಚಿತ್ರ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶನ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ಸಹ ದೊರೆತಿದೆ. ಈ ಮೂಲಕ ಕನ್ನಡ ಚಿತ್ರರಂಗ ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಪಾರಮ್ಯ ಮೆರೆದಿದೆ.

2022ರ ದಸರಾ ಸಂಭ್ರಮದಲ್ಲಿ ಕಾಂತಾರ ಸಿನಿಮಾ ತೆರೆ ಕಂಡಿತ್ತು. ಹೊಂಬಾಳೆ ಫಿಲ್ಮ್ಸ್‌ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡಿತ್ತು. ಮೊದಲಿಗ ಕನ್ನಡ ಚಿತ್ರವಾಗಿಯೇ ತೆರೆ ಕಂಡಿದ್ದ ಕಾಂತಾರ ಬಳಿಕ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ, ನಾಲ್ಕು ಭಾಷೆಗಳಿಗೆ ಡಬ್‌ ಆಗಿ ಹಿಟ್‌ ಆಗಿತ್ತು. ರಿಷಬ್‌ ಶೆಟ್ಟಿ ನಟನೆ ಕಂಡು ಪರಭಾಷಿಕರು ಬಹುಪರಕ್‌ ಎಂದಿದ್ದರು.

ಇನ್ನು ಅದೇ ವರ್ಷ ಅಂದರೆ 2022ರಲ್ಲೇ ರಾಕಿಂಗ್‌ ಸ್ಟಾರ್‌ ಯಶ್ ನಟನೆಯ ಕೆಜಿಎಫ್‌ ಚಾಪ್ಟರ್-‌2ಸಿನಿಮಾ ಬಿಡುಗಡೆಯಾಗಿತ್ತು. ಇದು ಐಎಂಡಿಬಿಯಲ್ಲಿಯೂ 8.5 ರೇಟಿಂಗ್‌ ಪಡೆದುಕೊಂಡಿತ್ತು.

ವಿಜೇತರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 2024 ರಲ್ಲಿ ಸಮಾರಂಭದಲ್ಲಿ ಗೌರವಿಸುತ್ತಾರೆ.
ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರಪ್ರಶಸ್ತಿ ಇದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago