ನವದೆಹಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರದ ರಿಷಬ್ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.
ಇನ್ನು ಕೆಜಿಎಫ್ 2 ಚಲನಚಿತ್ರ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶನ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ಸಹ ದೊರೆತಿದೆ. ಈ ಮೂಲಕ ಕನ್ನಡ ಚಿತ್ರರಂಗ ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಪಾರಮ್ಯ ಮೆರೆದಿದೆ.
2022ರ ದಸರಾ ಸಂಭ್ರಮದಲ್ಲಿ ಕಾಂತಾರ ಸಿನಿಮಾ ತೆರೆ ಕಂಡಿತ್ತು. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡಿತ್ತು. ಮೊದಲಿಗ ಕನ್ನಡ ಚಿತ್ರವಾಗಿಯೇ ತೆರೆ ಕಂಡಿದ್ದ ಕಾಂತಾರ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ, ನಾಲ್ಕು ಭಾಷೆಗಳಿಗೆ ಡಬ್ ಆಗಿ ಹಿಟ್ ಆಗಿತ್ತು. ರಿಷಬ್ ಶೆಟ್ಟಿ ನಟನೆ ಕಂಡು ಪರಭಾಷಿಕರು ಬಹುಪರಕ್ ಎಂದಿದ್ದರು.
ಇನ್ನು ಅದೇ ವರ್ಷ ಅಂದರೆ 2022ರಲ್ಲೇ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2ಸಿನಿಮಾ ಬಿಡುಗಡೆಯಾಗಿತ್ತು. ಇದು ಐಎಂಡಿಬಿಯಲ್ಲಿಯೂ 8.5 ರೇಟಿಂಗ್ ಪಡೆದುಕೊಂಡಿತ್ತು.
ವಿಜೇತರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 2024 ರಲ್ಲಿ ಸಮಾರಂಭದಲ್ಲಿ ಗೌರವಿಸುತ್ತಾರೆ.
ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರಪ್ರಶಸ್ತಿ ಇದಾಗಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…