ಮನರಂಜನೆ

National Awards: ಕಾಂತಾರ ಸ್ಟಾರ್‌ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ; KGF-2ಅತ್ಯುತ್ತಮ ಕನ್ನಡ ಚಿತ್ರ

ನವದೆಹಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರದ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.

ಇನ್ನು ಕೆಜಿಎಫ್ 2 ಚಲನಚಿತ್ರ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶನ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ಸಹ ದೊರೆತಿದೆ. ಈ ಮೂಲಕ ಕನ್ನಡ ಚಿತ್ರರಂಗ ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಪಾರಮ್ಯ ಮೆರೆದಿದೆ.

2022ರ ದಸರಾ ಸಂಭ್ರಮದಲ್ಲಿ ಕಾಂತಾರ ಸಿನಿಮಾ ತೆರೆ ಕಂಡಿತ್ತು. ಹೊಂಬಾಳೆ ಫಿಲ್ಮ್ಸ್‌ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡಿತ್ತು. ಮೊದಲಿಗ ಕನ್ನಡ ಚಿತ್ರವಾಗಿಯೇ ತೆರೆ ಕಂಡಿದ್ದ ಕಾಂತಾರ ಬಳಿಕ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ, ನಾಲ್ಕು ಭಾಷೆಗಳಿಗೆ ಡಬ್‌ ಆಗಿ ಹಿಟ್‌ ಆಗಿತ್ತು. ರಿಷಬ್‌ ಶೆಟ್ಟಿ ನಟನೆ ಕಂಡು ಪರಭಾಷಿಕರು ಬಹುಪರಕ್‌ ಎಂದಿದ್ದರು.

ಇನ್ನು ಅದೇ ವರ್ಷ ಅಂದರೆ 2022ರಲ್ಲೇ ರಾಕಿಂಗ್‌ ಸ್ಟಾರ್‌ ಯಶ್ ನಟನೆಯ ಕೆಜಿಎಫ್‌ ಚಾಪ್ಟರ್-‌2ಸಿನಿಮಾ ಬಿಡುಗಡೆಯಾಗಿತ್ತು. ಇದು ಐಎಂಡಿಬಿಯಲ್ಲಿಯೂ 8.5 ರೇಟಿಂಗ್‌ ಪಡೆದುಕೊಂಡಿತ್ತು.

ವಿಜೇತರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 2024 ರಲ್ಲಿ ಸಮಾರಂಭದಲ್ಲಿ ಗೌರವಿಸುತ್ತಾರೆ.
ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರಪ್ರಶಸ್ತಿ ಇದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

34 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

36 mins ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

38 mins ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

43 mins ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

4 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

4 hours ago