ಮನರಂಜನೆ

‘ನೋಡಿದವರು ಏನಂತಾರೆ’ ಅಂತ ಕೇಳ್ತಿದ್ದಾರೆ ನವೀನ್‍ ಶಂಕರ್…

‘ಗುಳ್ಟೂ’ ಖ್ಯಾತಿಯ ನವೀನ್‍ ಶಂಕರ್‍ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿದೆ. ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್‍’ ಕಳೆದ ವರ್ಷ ಕೊನೆಗೆ ಬಿಡುಗಡೆಯಾದ ನಂತರ, ನವೀನ್‍ ಅಭಿನಯದ ಯಾವೊಂದು ಚಿತ್ರವೂ ಈ ಒಂದು ವರ್ಷದಲ್ಲಿ ಬಿಡುಗಡೆಯಾಗಿರಲಿಲ್ಲ. ಈಗ ‘ನೋಡಿದವರು ಏನಂತಾರೆ’ ಎಂಬ ಚಿತ್ರದೊಂದಿಗೆ ನವೀನ್‍ ವಾಪಸ್ಸಾಗುತ್ತಿದ್ದಾರೆ.

‘ನೋಡಿದವರು ಏನಂತಾರೆ’, ನವೀನ್‍ ನಾಯಕನಾಗಿ ನಟಿಸಿರುವ ಚಿತ್ರ. ಈ ಚಿತ್ರವು ಜನವರಿ 31ರಂದು ಬಿಡುಗಡೆಯಾಗಲಿದ್ದು, ಈ ಚಿತ್ರದ ಪೋಸ್ಟರ್‍ ಇದೀಗ ಬಿಡುಗಡೆಯಾಗಿದೆ. ಈ ಚಿತ್ರವನ್ನು ಕುಲದೀಪ್ ಕಾರ್ಯಪ್ಪ ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ನಿರ್ಮಾಣ ಮಾಡಿದ್ದಾರೆ.

‘ನೋಡಿದವರು ಏನಂತಾರೆ’ ಕುರಿತು ಮಾತನಾಡುವ ಕುಲದೀಪ್, ‘ನವೀನ್ ಶಂಕರ್ ಅವರ ಪಾತ್ರ ನಮ್ಮೆಲ್ಲರ ಒಳಗಿರುವ ಒಬ್ಬ ಮನುಷ್ಯನ ಕಥೆ ಹಾಗು ಭಾವನೆಗಳನ್ನು ಹೇಳುತ್ತದೆ. ಜೀವನದಲ್ಲಿ ನಮ್ಮ ಅಸ್ತ್ವಿತ್ವದ ಬಗ್ಗೆಯೇ ನಮಗೆ ಕಾಡುವ ಪ್ರಶ್ನೆಗಳು, ಪ್ರೀತಿ, ಆತ್ಮಾವಲೋಕನ ಹಾಗೂ ಬಾಂಧವ್ಯಗಳ ಸುತ್ತ ಈ ಸಿನಿಮಾ ಸಾಗುತ್ತದೆ’ ಎನ್ನುತ್ತಾರೆ.

ಕರ್ನಾಟಕದ ಪ್ರೇಕ್ಷಣೀಯ ಹಾಗೂ ಅಪರೂಪದ ಸುಂದರ ತಾಣಗಳಲ್ಲಿ ‘ನೋಡಿದವರು ಏನಂತಾರೆ’ ಸಿನಿಮಾ ಚಿತ್ರೀಕರಣಗೊಂಡಿದೆ. ಆಶ್ವಿನ್ ಕೆನೆಡಿ ಛಾಯಾಗ್ರಾಹಕರಾಗಿ ಕೆಲಸ ಮೂಡಿದ್ದು, ಮಯೂರೆಶ್ ಅಧಿಕಾರಿ ಸಂಗೀತ ಸಂಯೋಜಿಸಿದ್ದಾರೆ. ಮನು ಶೆಡಗಾರ್ ಸಂಕಲನ ಚಿತ್ರಕ್ಕಿದೆ. ಎರಡು ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ರಚಿಸಿದ್ದು, ಸಾಧು ಕೋಕಿಲ, ಅನನ್ಯಾ ಭಟ್, ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

‘ನೋಡಿದವರು ಏನಂತಾರೆ’ ಚಿತ್ರದಲ್ಲಿ ನವೀನ್‍ಗೆ ನಾಯಕಿಯಾಗಿ ಅಪೂರ್ವ ಭಾರದ್ವಾಜ್‍ ನಟಿಸಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago