ಮೈಸೂರು: ಪ್ರೀತಿ ನಿರಾಕರಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಕೊಂದು ಅಟ್ಟಹಾಸ ಮೆರೆದಿದ್ದ ಫಯಾಜ್ ವಿರುದ್ಧ ಕಾನೂನಾತ್ಮ ಹೋರಾಟ ಮಾಡುವಂತೆ ಸಮಾಜಿಕ ಜಾಲತಾಣದಲ್ಲಿ ಕೂಗು ಕೇಳಿಬುರುತ್ತಿದೆ. ಈ ಕೂಗಿದೆ ಸ್ಯಾಂಡಲ್ವುಡ್ ಕೂಡ ಧನಿ ಗೂಡಿಸಿದೆ.
ಹುಬ್ಬಳಿಯ ನೇಹಾ ಹೀರೆಮಠ್ ಅವರನ್ನು ಅದೇ ಜಿಲ್ಲೆಯ ಫಯಾಜ್ ಎಂಬುವವನು ಪ್ರೀತಿಸುವಂತೆ ಕೇಳಿದ್ದು, ಇದನ್ನು ನಿರಾಕರಿಸಿದ ಕಾರಣ ಆಕೆಯನ್ನು ಹತ್ಯೆಗೈದಿದ್ದನು. ಈ ಪ್ರಕರಣ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿತ್ತು. ಇದಕ್ಕೆ ಸದ್ಯ ಕನ್ನಡ ಚಿತ್ರರಂಗವೂ ಕೈ ಜೋಡಿಸಿದೆ.
ಡಿ ಬಾಸ್ ದರ್ಶನ್, ರಚಿತಾ ರಾಮ್, ರಿಷಭ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಹಲವು ನಟ ನಟಿಯರು ನೇಹಾ ಗೆ ನ್ಯಾಯ ಸಿಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ದರ್ಶನ್ ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ. #JusticeForNehaHiremath ಎಂದು ಬರೆದುಕೊಂಡಿದ್ದಾರೆ.
ಇವರಿಗೆ ಪ್ರಣಿತಾ ಸುಭಾಶ್, ಡಾ. ಶಿವರಾಜ್ ಕುಮಾರ್, ಕಾರುಣ್ಯ ರಾಮ್, ಕೂಡಾ ಧನಿ ಎತ್ತುವ ಮೂಲಕ ದರ್ಶನ್ಗೆ ಸಾಥ್ ನೀಡಿದ್ದಾರೆ.
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…