ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಕನ್ನಡ ಚಿತ್ರರಂಗದ ನಟ, ನಟಿಯರು ಸೋಶಿಯಲ್ ಮೀಡಿಯಾ ಮೂಲಕ ತೀವ್ರವಾಗಿ ಖಂಡಿಸಿದ್ದಾರೆ.
ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಹಿಸಬೇಕು. ಹಾಗೂ ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಜೈ ಆಂಜನೇಯ ಎಂದು ನಟ ಧ್ರುವ ಸರ್ಜಾ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ, ನೇಹಾ ಹಿರೇಮಠ ಅವರ ಕೊಲೆ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನೂ ರಚಿತರಾಮ್ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ, ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೇ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮ್ಯಾನ್ಯರ ಕೈಗೆ ಒಪ್ಪಿಸಿ ಎಂದು ಪೋಸ್ಟ್ ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…