Categories: ಮನರಂಜನೆ

Nenapirali Prem; ನಿರಂಜನ್‌ ಸುಧೀಂದ್ರ ಜೊತೆಗೆ ‘ನೆನಪಿರಲಿ’ ಪ್ರೇಮ್; ʼಸ್ಪಾರ್ಕ್‌ʼಗೆ ಹೊಸ ಸೇರ್ಪಡೆ

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.

ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ ಕೆಲವು ತಿಂಗಳುಗಳ ಹಿಂದೆ ಸೆಟ್ಟೇರಿದ್ದು ನೆನಪಿರಬೇಕಲ್ಲಾ? ಆ ಚಿತ್ರದಲ್ಲಿ ಪ್ರೇಮ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್‌’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುನ್ನ ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಮಹಾಂತೇಶ್‍, ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರು ಸಂಗೀತ‌ ಈ ಚಿತ್ರಕ್ಕಿದ್ದು, ಚಿತ್ರೀಕರಣ ಭರದಿಂದ ಸಾಗಿದೆ.

ಚಿತ್ರದಲ್ಲಿ ನಿರಂಜನ್ ಸುಧೀಂದ್ರ ಪತ್ರಕರ್ತನಾಗಿ ನಟಿಸುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ಈಗ ಚಿತ್ರಕ್ಕೆ ಪ್ರೇಮ್‍ ಅವರ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಪ್ರೇಮ್‍ ಪಾತ್ರವೇನು? ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆ ಬರಬಹುದು. ಪ್ರೇಮ್‍ ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ನಿರ್ದೇಶಕ ಮಹಾಂತೇಶ್ ಹಂದ್ರಾಳ್, ಪ್ರೇಮ್‍ ಅವರಿಗೆಂದೇ ವಿಶೇಷ ಪಾತ್ರವನ್ನು ಡಿಸೈನ್ ಮಾಡಿದ್ದಾರಂತೆ. ಹಿಂದೆಂದೂ ಕಾಣದ ಲುಕ್‍ನಲ್ಲಿ ಪ್ರೇಮ್‌ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದಲ್ಲದೆ, ಕಳೆದ ವರ್ಷ ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಹೊಸ ಚಿತ್ರದ ಮುಹೂರ್ತವಾಗಿತ್ತು. ಈ ಚಿತ್ರದಲ್ಲಿ ಅವರು ಖಡಕ್‍ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ನಾಯಕಿಯಾಗಿ ‘ಕೃಷ್ಣಂ ಪ್ರಣಯ ಸಖಿ’ ಖ್ಯಾತಿಯ ಶರಣ್ಯ ಶೆಟ್ಟಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

2 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

3 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

3 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

4 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

4 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

5 hours ago