Categories: ಮನರಂಜನೆ

Nenapirali Prem; ನಿರಂಜನ್‌ ಸುಧೀಂದ್ರ ಜೊತೆಗೆ ‘ನೆನಪಿರಲಿ’ ಪ್ರೇಮ್; ʼಸ್ಪಾರ್ಕ್‌ʼಗೆ ಹೊಸ ಸೇರ್ಪಡೆ

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.

ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ ಕೆಲವು ತಿಂಗಳುಗಳ ಹಿಂದೆ ಸೆಟ್ಟೇರಿದ್ದು ನೆನಪಿರಬೇಕಲ್ಲಾ? ಆ ಚಿತ್ರದಲ್ಲಿ ಪ್ರೇಮ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್‌’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುನ್ನ ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಮಹಾಂತೇಶ್‍, ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರು ಸಂಗೀತ‌ ಈ ಚಿತ್ರಕ್ಕಿದ್ದು, ಚಿತ್ರೀಕರಣ ಭರದಿಂದ ಸಾಗಿದೆ.

ಚಿತ್ರದಲ್ಲಿ ನಿರಂಜನ್ ಸುಧೀಂದ್ರ ಪತ್ರಕರ್ತನಾಗಿ ನಟಿಸುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ಈಗ ಚಿತ್ರಕ್ಕೆ ಪ್ರೇಮ್‍ ಅವರ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಪ್ರೇಮ್‍ ಪಾತ್ರವೇನು? ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆ ಬರಬಹುದು. ಪ್ರೇಮ್‍ ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ನಿರ್ದೇಶಕ ಮಹಾಂತೇಶ್ ಹಂದ್ರಾಳ್, ಪ್ರೇಮ್‍ ಅವರಿಗೆಂದೇ ವಿಶೇಷ ಪಾತ್ರವನ್ನು ಡಿಸೈನ್ ಮಾಡಿದ್ದಾರಂತೆ. ಹಿಂದೆಂದೂ ಕಾಣದ ಲುಕ್‍ನಲ್ಲಿ ಪ್ರೇಮ್‌ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದಲ್ಲದೆ, ಕಳೆದ ವರ್ಷ ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಹೊಸ ಚಿತ್ರದ ಮುಹೂರ್ತವಾಗಿತ್ತು. ಈ ಚಿತ್ರದಲ್ಲಿ ಅವರು ಖಡಕ್‍ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ನಾಯಕಿಯಾಗಿ ‘ಕೃಷ್ಣಂ ಪ್ರಣಯ ಸಖಿ’ ಖ್ಯಾತಿಯ ಶರಣ್ಯ ಶೆಟ್ಟಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago