ಮನರಂಜನೆ

ಸಿತಾರೆ ಜಮೀನ್‍ ಪರ್’ ಓಟಿಟಿ ಹಕ್ಕುಗಳಿಗೆ ನೆಟ್‍ಫ್ಲಿಕ್ಸ್ 125 ಕೋಟಿ ರೂ. ಆಫರ್

ಆಮೀರ್ ಖಾನ್‍ ಅಭಿನಯದ ‘ಸಿತಾರೆ ಜಮೀನ್‍ ಪರ್’ ಚಿತ್ರವು ಜೂನ್‍.20ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಡಿಜಿಟಲ್‍ ಹಕ್ಕುಗಳಿಗೆ ಭಾರೀ ಬೇಡಿಕೆ ಬಂದಿದ್ದು, ಹಕ್ಕುಗಳನ್ನು ಪಡೆಯುವುದಕ್ಕೆ ನೆಟ್‍ಫ್ಲಿಕ್ಸ್ 125 ಕೋಟಿ ರೂ. ಆಫರ್ ನೀಡಿದೆ ಎಂದು ಹೇಳಲಾಗುತ್ತಿದೆ.

ಚಿತ್ರದ ಡಿಜಿಟಲ್‍ ಹಕ್ಕುಗಳಿಗೆ ಓಟಿಟಿ ವೇದಿಕೆಗಳು ದೊಡ್ಡ ಮಟ್ಟದ ಹಣ ಕೊಡುವುದು ಹೊಸದೇನಲ್ಲ. ‘ಪುಷ್ಪಾ 2’ ಚಿತ್ರದ ಹಕ್ಕುಗಳಿಗೆ ನೆಟ್‍ಫ್ಲಿಕ್ಸ್, 270 ಕೋಟಿ ರೂ ನೀಡಿದ್ದು ಸುದ್ದಿಯಾಗಿತ್ತು. ‘ಪುಷ್ಪಾ 2’ಗೆ ಹೋಲಿಸಿದರೆ, ‘ಸಿತಾರೆ ಜಮೀನ್‍ ಪರ್’ ಚಿತ್ರದ ಹಕ್ಕುಗಳನ್ನು ಖರೀದಿಸುವುದಕ್ಕೆ 125 ಕೋಟಿ ರೂ ಖರ್ಚು ಮಾಡುತ್ತಿರುವುದು ದೊಡ್ಡ ವಿಷಯವೇನಲ್ಲ.

ಇದಕ್ಕೂ ಮೊದಲು ಯಾವುದೋ ಓಟಿಟಿಗೆ ಡಿಜಿಟಲ್‍ ಹಕ್ಕುಗಳನ್ನು ಕೊಡುವ ಬದಲು ಯಾಕೆ ತಮ್ಮದೇ ಯೂಟ್ಯೂಬ್‍ ಚಾನಲ್‍ನಲ್ಲಿ Pay-Per-View ಮಾದರಿಯಲ್ಲಿ ಬಿಡುಗಡೆ ಮಾಡುವ ಯೋಚನೆಯನ್ನು ಆಮೀರ್ ಖಾನ್‍ ಮಾಡಿದ್ದರು. ಹಕ್ಕುಗಳಿಗೆ ಒಂದು ನಿರ್ದಿಷ್ಟವಾದ ಮೊತ್ತವನ್ನು ನೀಡಲಾಗುತ್ತದೆ. ಆದರೆ, ತಾವೇ ಚಿತ್ರವನ್ನು ಯೂಟ್ಯೂಬ್‍ ಮೂಲಕ ಬಿಡುಗಡೆ ಮಾಡಿದರೆ, ಆಗ ಹಕ್ಕುಗಳು ಸಹ ಜೊತೆಗಿರುತ್ತದೆ ಮತ್ತು ಜಾಸ್ತಿ ದುಡಿಯುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ, ಚಿತ್ರವನ್ನು ತಮ್ಮದೇ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಮಾಡುವುದಕ್ಕೆ ಆಮೀರ್ ಖಾನ್‍ ಯೋಚಿಸಿದ್ದರಂತೆ.

ಹಾಗಾಗಿಯೇ, ಮೊದಲು ಚಿತ್ರದ ಹಕ್ಕುಗಳನ್ನು ಖರೀದಿಸುವುದಕ್ಕೆ 60 ಕೋಟಿ ಎತ್ತಿಟ್ಟಿದ್ದ ನೆಟ್‍ಫ್ಲಿಕ್ಸ್, ಯಾವಾಗ ಆಮೀರ್ ಇಂಥದ್ದೊಂದು ನಿರ್ಧಾರಕ್ಕೆ ಬಂದರೋ, ಆಗ ಮೊತ್ತವನ್ನು ಏರಿಸಿದೆ. 60 ಕೋಟಿ ಬದಲು 125 ಕೋಟಿ ರೂ ಕೊಟ್ಟು ಡಿಜಿಟಲ್‍ ಹಕ್ಕುಗಳನ್ನು ಪಡೆಯುವುದಕ್ಕೆ ಮುಂದಾಯಿತಂತೆ. ಅದಕ್ಕೆ ಕಾರಣವೂ ಇದೆ. ಆಮೀರ್ ಖಾನ್‍ ಅವರ ಈ ನಡೆಯಿಂದ ಮುಂದೆ ಓಟಿಟಿ ವೇದಿಕೆಗಳಿಗೆ ದೊಡ್ಡ ಅಪಾಯ ಬರುವ ಸಾಧ್ಯತೆ ಇದೆ. ಹೇಗೆಂದರೆ, ಮುಂದಿನ ದಿನಗಳಲ್ಲಿ ಎಲ್ಲರೂ ಓಟಿಟಿ ಬಿಟ್ಟು, ತಮ್ಮದೇ ಯೂಟ್ಯೂಬ್‍ ಚಾನಲ್‍ನಲ್ಲಿ Pay-Per-View ಮಾದರಿಯಲ್ಲಿ ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡಿದರೆ, ಇದರಿಂದ ಇಡೀ ವ್ಯವಸ್ಥೆಗೆ ಪೆಟ್ಟು ಬಿದ್ದಂತಾಗುತ್ತದೆ. ಹಾಗಾಗಿ, ಆಮೀರ್ ಖಾನ್‍ರನ್ನು ತಡೆಯುವುದಕ್ಕೆ ದುಪ್ಪಟ್ಟ ಆಫರ್ ನೀಡಲಾಗಿದೆ ಎಂದು ಹೇಳಲಾಗಿದೆ.

‘ಸಿತಾರೆ ಜಮೀನ್‍ ಪರ್’ ಚಿತ್ರವು ‘ಚಾಂಪಿಯನ್ಸ್’ ಎಂಬ ಸ್ಪಾನಿಶ್‍ ಚಿತ್ರದ ರೀಮೇಕ್‍ ಆಗಿದ್ದು, ಈ ಚಿತ್ರದಲ್ಲಿ ಆಮೀರ್ ಖಾನ್‍ ಜೊತೆಗೆ ಜೆನಿಲಿಯಾ ಡಿಸೋಜ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ಆರ್.ಎಸ್.ಪ್ರಸನ್ನ ನಿರ್ದೇಶಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

15 mins ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

36 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

1 hour ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

2 hours ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

2 hours ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

2 hours ago