ಮನರಂಜನೆ

ಸಿತಾರೆ ಜಮೀನ್‍ ಪರ್’ ಓಟಿಟಿ ಹಕ್ಕುಗಳಿಗೆ ನೆಟ್‍ಫ್ಲಿಕ್ಸ್ 125 ಕೋಟಿ ರೂ. ಆಫರ್

ಆಮೀರ್ ಖಾನ್‍ ಅಭಿನಯದ ‘ಸಿತಾರೆ ಜಮೀನ್‍ ಪರ್’ ಚಿತ್ರವು ಜೂನ್‍.20ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಡಿಜಿಟಲ್‍ ಹಕ್ಕುಗಳಿಗೆ ಭಾರೀ ಬೇಡಿಕೆ ಬಂದಿದ್ದು, ಹಕ್ಕುಗಳನ್ನು ಪಡೆಯುವುದಕ್ಕೆ ನೆಟ್‍ಫ್ಲಿಕ್ಸ್ 125 ಕೋಟಿ ರೂ. ಆಫರ್ ನೀಡಿದೆ ಎಂದು ಹೇಳಲಾಗುತ್ತಿದೆ.

ಚಿತ್ರದ ಡಿಜಿಟಲ್‍ ಹಕ್ಕುಗಳಿಗೆ ಓಟಿಟಿ ವೇದಿಕೆಗಳು ದೊಡ್ಡ ಮಟ್ಟದ ಹಣ ಕೊಡುವುದು ಹೊಸದೇನಲ್ಲ. ‘ಪುಷ್ಪಾ 2’ ಚಿತ್ರದ ಹಕ್ಕುಗಳಿಗೆ ನೆಟ್‍ಫ್ಲಿಕ್ಸ್, 270 ಕೋಟಿ ರೂ ನೀಡಿದ್ದು ಸುದ್ದಿಯಾಗಿತ್ತು. ‘ಪುಷ್ಪಾ 2’ಗೆ ಹೋಲಿಸಿದರೆ, ‘ಸಿತಾರೆ ಜಮೀನ್‍ ಪರ್’ ಚಿತ್ರದ ಹಕ್ಕುಗಳನ್ನು ಖರೀದಿಸುವುದಕ್ಕೆ 125 ಕೋಟಿ ರೂ ಖರ್ಚು ಮಾಡುತ್ತಿರುವುದು ದೊಡ್ಡ ವಿಷಯವೇನಲ್ಲ.

ಇದಕ್ಕೂ ಮೊದಲು ಯಾವುದೋ ಓಟಿಟಿಗೆ ಡಿಜಿಟಲ್‍ ಹಕ್ಕುಗಳನ್ನು ಕೊಡುವ ಬದಲು ಯಾಕೆ ತಮ್ಮದೇ ಯೂಟ್ಯೂಬ್‍ ಚಾನಲ್‍ನಲ್ಲಿ Pay-Per-View ಮಾದರಿಯಲ್ಲಿ ಬಿಡುಗಡೆ ಮಾಡುವ ಯೋಚನೆಯನ್ನು ಆಮೀರ್ ಖಾನ್‍ ಮಾಡಿದ್ದರು. ಹಕ್ಕುಗಳಿಗೆ ಒಂದು ನಿರ್ದಿಷ್ಟವಾದ ಮೊತ್ತವನ್ನು ನೀಡಲಾಗುತ್ತದೆ. ಆದರೆ, ತಾವೇ ಚಿತ್ರವನ್ನು ಯೂಟ್ಯೂಬ್‍ ಮೂಲಕ ಬಿಡುಗಡೆ ಮಾಡಿದರೆ, ಆಗ ಹಕ್ಕುಗಳು ಸಹ ಜೊತೆಗಿರುತ್ತದೆ ಮತ್ತು ಜಾಸ್ತಿ ದುಡಿಯುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ, ಚಿತ್ರವನ್ನು ತಮ್ಮದೇ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಮಾಡುವುದಕ್ಕೆ ಆಮೀರ್ ಖಾನ್‍ ಯೋಚಿಸಿದ್ದರಂತೆ.

ಹಾಗಾಗಿಯೇ, ಮೊದಲು ಚಿತ್ರದ ಹಕ್ಕುಗಳನ್ನು ಖರೀದಿಸುವುದಕ್ಕೆ 60 ಕೋಟಿ ಎತ್ತಿಟ್ಟಿದ್ದ ನೆಟ್‍ಫ್ಲಿಕ್ಸ್, ಯಾವಾಗ ಆಮೀರ್ ಇಂಥದ್ದೊಂದು ನಿರ್ಧಾರಕ್ಕೆ ಬಂದರೋ, ಆಗ ಮೊತ್ತವನ್ನು ಏರಿಸಿದೆ. 60 ಕೋಟಿ ಬದಲು 125 ಕೋಟಿ ರೂ ಕೊಟ್ಟು ಡಿಜಿಟಲ್‍ ಹಕ್ಕುಗಳನ್ನು ಪಡೆಯುವುದಕ್ಕೆ ಮುಂದಾಯಿತಂತೆ. ಅದಕ್ಕೆ ಕಾರಣವೂ ಇದೆ. ಆಮೀರ್ ಖಾನ್‍ ಅವರ ಈ ನಡೆಯಿಂದ ಮುಂದೆ ಓಟಿಟಿ ವೇದಿಕೆಗಳಿಗೆ ದೊಡ್ಡ ಅಪಾಯ ಬರುವ ಸಾಧ್ಯತೆ ಇದೆ. ಹೇಗೆಂದರೆ, ಮುಂದಿನ ದಿನಗಳಲ್ಲಿ ಎಲ್ಲರೂ ಓಟಿಟಿ ಬಿಟ್ಟು, ತಮ್ಮದೇ ಯೂಟ್ಯೂಬ್‍ ಚಾನಲ್‍ನಲ್ಲಿ Pay-Per-View ಮಾದರಿಯಲ್ಲಿ ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡಿದರೆ, ಇದರಿಂದ ಇಡೀ ವ್ಯವಸ್ಥೆಗೆ ಪೆಟ್ಟು ಬಿದ್ದಂತಾಗುತ್ತದೆ. ಹಾಗಾಗಿ, ಆಮೀರ್ ಖಾನ್‍ರನ್ನು ತಡೆಯುವುದಕ್ಕೆ ದುಪ್ಪಟ್ಟ ಆಫರ್ ನೀಡಲಾಗಿದೆ ಎಂದು ಹೇಳಲಾಗಿದೆ.

‘ಸಿತಾರೆ ಜಮೀನ್‍ ಪರ್’ ಚಿತ್ರವು ‘ಚಾಂಪಿಯನ್ಸ್’ ಎಂಬ ಸ್ಪಾನಿಶ್‍ ಚಿತ್ರದ ರೀಮೇಕ್‍ ಆಗಿದ್ದು, ಈ ಚಿತ್ರದಲ್ಲಿ ಆಮೀರ್ ಖಾನ್‍ ಜೊತೆಗೆ ಜೆನಿಲಿಯಾ ಡಿಸೋಜ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ಆರ್.ಎಸ್.ಪ್ರಸನ್ನ ನಿರ್ದೇಶಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

4 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

7 hours ago