ಮನರಂಜನೆ

ಸೀತೆಯ ಹುಡುಕುತ ಪಯಣ ಹೊರಣ ನಿರಂಜನ್ ಸುಧೀಂದ್ರ

ಅರ್ಜುನ್‍ ಸರ್ಜಾ ನಿರ್ದೇಶನದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಇದೀಗ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು, ಚಿತ್ರಕ್ಕೆ ಸೀತಾ ಪಯಣ ಎಂಬ ಹೆಸರನ್ನು ಇಡಲಾಗಿದೆ.

ಹೌದು, ಇತ್ತೀಚೆಗೆ ಸೀತಾ ಪಯಣ ಚಿತ್ರದ ಮೊದಲ ಪೋಸ್ಟರ್‍ ಬಿಡುಗಡೆಯಾಗಿದೆ. ಹೆಸರು ಕೇಳಿದರೆ ಇದೊಂದು ನಾಯಕಿ ಪ್ರಧಾನ ಚಿತ್ರ ಎಂದನಿಸುತ್ತದೆ. ಅದಕ್ಕೆ ಸರಿಯಾಗಿ ಈ ಚಿತ್ರದಲ್ಲಿ ಅರ್ಜುನ್‍ ಸರ್ಜಾ ಅವರ ಮಗಳು ಐಶ್ವರ್ಯ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಇದೆ. ಐಶ್ವರ್ಯಾ ಅರ್ಜುನ್‍ ಎದುರು ನಾಯಕನಾಗಿ ನಿರಂಜನ್‍ ಸುಧೀಂದ್ರ ನಟಿಸುತ್ತಿದ್ದಾರಂತೆ.

ಸೀತಾ ಪಯಣ ಚಿತ್ರವನ್ನು ಅರ್ಜುನ್‍ ಸರ್ಜಾ ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ತಮ್ಮ ಶ್ರೀ ರಾಮ್‍ ಫಿಲಂಸ್ ಇಂಟರ್‍ನ್ಯಾಷನಲ್‍ ಸಂಸ್ಥೆಯಡಿ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರು ನಟಿಸುತ್ತಿದ್ದಾರೆ, ಕಥೆ ಏನು ಮುಂತಾದ ವಿಷಯಗಳನ್ನು ಅರ್ಜುನ್‍ ಸರ್ಜಾ ಸದ್ಯ ಬಿಟ್ಟುಕೊಟ್ಟಿಲ್ಲ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

2018ರಲ್ಲಿ ಬಿಡುಗಡೆಯಾದ ಪ್ರೇಮ ಬರಹ ಚಿತ್ರದ ನಂತರ ಅರ್ಜುನ್‍ ಸರ್ಜಾ ಬೇರೆ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಚಂದನ್‍ ಮತ್ತು ಐಶ್ವರ್ಯಾ ಅಭಿನಯದಲ್ಲಿ ತಯಾರಾದ ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿತ್ತು. ಆದರೆ, ಚಿತ್ರ ನಿರೀಕ್ಷಿತ ಯಶಸ್ಸು ಕಾಣಲಿಲ್ಲ.

ಇನ್ನು, ನಿರಂಜನ್‍ ಸುಧೀಂದ್ರ ಸದ್ಯ ಸೂಪರ್‍ ಸ್ಟಾರ್‍ ಮತ್ತು ಹಂಟರ್‍ ಎಂಬ ಎರಡು ಚಿತ್ರಗಳಲ್ಲಿ ನಟಿಸಿದ್ದು, ಆ ಎರಡೂ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ. ಈ ಮಧ್ಯೆ, ನಾಗಶೇಖರ್‍ ನಿರ್ದೇಶಿಸಲಿರುವ ‘ಕ್ಯೂ’ಎಂಬ ಚಿತ್ರಕ್ಕೂ ನಿರಂಜನ್‍ ನಾಯಕನಾಗಿ ಆಯ್ಕೆಯಾಗಿದ್ದು, ಆ ಚಿತ್ರ ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

5 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

5 hours ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

6 hours ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

6 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

7 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

7 hours ago