ಮನರಂಜನೆ

ಸೀತೆಯ ಹುಡುಕುತ ಪಯಣ ಹೊರಣ ನಿರಂಜನ್ ಸುಧೀಂದ್ರ

ಅರ್ಜುನ್‍ ಸರ್ಜಾ ನಿರ್ದೇಶನದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಇದೀಗ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು, ಚಿತ್ರಕ್ಕೆ ಸೀತಾ ಪಯಣ ಎಂಬ ಹೆಸರನ್ನು ಇಡಲಾಗಿದೆ.

ಹೌದು, ಇತ್ತೀಚೆಗೆ ಸೀತಾ ಪಯಣ ಚಿತ್ರದ ಮೊದಲ ಪೋಸ್ಟರ್‍ ಬಿಡುಗಡೆಯಾಗಿದೆ. ಹೆಸರು ಕೇಳಿದರೆ ಇದೊಂದು ನಾಯಕಿ ಪ್ರಧಾನ ಚಿತ್ರ ಎಂದನಿಸುತ್ತದೆ. ಅದಕ್ಕೆ ಸರಿಯಾಗಿ ಈ ಚಿತ್ರದಲ್ಲಿ ಅರ್ಜುನ್‍ ಸರ್ಜಾ ಅವರ ಮಗಳು ಐಶ್ವರ್ಯ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಇದೆ. ಐಶ್ವರ್ಯಾ ಅರ್ಜುನ್‍ ಎದುರು ನಾಯಕನಾಗಿ ನಿರಂಜನ್‍ ಸುಧೀಂದ್ರ ನಟಿಸುತ್ತಿದ್ದಾರಂತೆ.

ಸೀತಾ ಪಯಣ ಚಿತ್ರವನ್ನು ಅರ್ಜುನ್‍ ಸರ್ಜಾ ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ತಮ್ಮ ಶ್ರೀ ರಾಮ್‍ ಫಿಲಂಸ್ ಇಂಟರ್‍ನ್ಯಾಷನಲ್‍ ಸಂಸ್ಥೆಯಡಿ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರು ನಟಿಸುತ್ತಿದ್ದಾರೆ, ಕಥೆ ಏನು ಮುಂತಾದ ವಿಷಯಗಳನ್ನು ಅರ್ಜುನ್‍ ಸರ್ಜಾ ಸದ್ಯ ಬಿಟ್ಟುಕೊಟ್ಟಿಲ್ಲ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

2018ರಲ್ಲಿ ಬಿಡುಗಡೆಯಾದ ಪ್ರೇಮ ಬರಹ ಚಿತ್ರದ ನಂತರ ಅರ್ಜುನ್‍ ಸರ್ಜಾ ಬೇರೆ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಚಂದನ್‍ ಮತ್ತು ಐಶ್ವರ್ಯಾ ಅಭಿನಯದಲ್ಲಿ ತಯಾರಾದ ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿತ್ತು. ಆದರೆ, ಚಿತ್ರ ನಿರೀಕ್ಷಿತ ಯಶಸ್ಸು ಕಾಣಲಿಲ್ಲ.

ಇನ್ನು, ನಿರಂಜನ್‍ ಸುಧೀಂದ್ರ ಸದ್ಯ ಸೂಪರ್‍ ಸ್ಟಾರ್‍ ಮತ್ತು ಹಂಟರ್‍ ಎಂಬ ಎರಡು ಚಿತ್ರಗಳಲ್ಲಿ ನಟಿಸಿದ್ದು, ಆ ಎರಡೂ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ. ಈ ಮಧ್ಯೆ, ನಾಗಶೇಖರ್‍ ನಿರ್ದೇಶಿಸಲಿರುವ ‘ಕ್ಯೂ’ಎಂಬ ಚಿತ್ರಕ್ಕೂ ನಿರಂಜನ್‍ ನಾಯಕನಾಗಿ ಆಯ್ಕೆಯಾಗಿದ್ದು, ಆ ಚಿತ್ರ ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆ ಶಿವಮೊಗ್ಗ, ಮೈಸೂರು, ಬೆಂಗಳೂರಿನಲ್ಲಿ ಕಂಬಳ ಆಯೋಜನೆ

ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ. ರಾಜ್ಯದ…

28 mins ago

ಓದುಗರ ಪತ್ರ: ಪ್ರತಿಯೊಬ್ಬರಿಗೂ ನಾಗರಿಕ ಪ್ರಜ್ಞೆ ಅಗತ್ಯ

ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…

3 hours ago

ಓದುಗರ ಪತ್ರ: ಸಾರ್ವಜನಿಕವಾಗಿ ಶುಚಿ ಪ್ಯಾಡ್ ದೊರೆಯಲಿ

ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…

3 hours ago

ಓದುಗರ ಪತ್ರ: ವಿದೇಶಿ ಸಂಗ್ರಹಾಲಯದಿಂದ ನಾಡಿನ ಶಿಲ್ಪಗಳನ್ನು ಹಿಂಪಡೆಯಿರಿ

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…

4 hours ago

ಓದುಗರ ಪತ್ರ: ಬದನವಾಳು ಗ್ರಾಮ ಸ್ವರಾಜ್ಯದ ಕನಸನ್ನು ನೆನಪಿಸಿದ ಆಂದೋಲನ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…

4 hours ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಬ್ಯಾಂಕ್ ಠೇವಣಿಗಳಿಗಿಂತ ವೇಗವಾಗಿ ಸಾಲಗಳು ಬೆಳೆಯುತ್ತಿವೆ

ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…

4 hours ago