ಮನರಂಜನೆ

ಮತ್ತೆ ಬಂದರು ಅರ್ಜುನ್‍ ಸರ್ಜಾ; ನಿರಂಜನ್ ಅಭಿನಯದಲ್ಲಿ ಹೊಸ ಚಿತ್ರ

ಯಾಕೋ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಚಿತ್ರರಂಗಕ್ಕೆ ಬಂದು ಐದಾರು ವರ್ಷಗಳು ಕಳೆದರೂ ಇನ್ನೂ ಒಂದು ಯಶಸ್ಸು ಕಾಣುವುದಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಕಡೆ ಬಿಡುಗಡೆಯಾದ ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಮಾಯವಾಗುತ್ತಿದ್ದರೆ, ಇನ್ನೊಂದು ಕಡೆ ಒಪ್ಪಿದ ಚಿತ್ರಗಳು ಅಂದುಕೊಂಡಂತೆ ಬಿಡುಗಡೆಯಾಗುತ್ತಿಲ್ಲ. ಮೂರ್ನಾಲ್ಕು ಚಿತ್ರಗಳಲ್ಲಿ ನಟಿಸಿರುವ ನಿರಂಜನ್‍, ಇನ್ನೂ ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಲೇ ಇದ್ದಾರೆ.

ಹೀಗಿರುವಾಗಲೇ, ನಿರಂಜನ್‍ ಇದೀಗ ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ. ಈ ಬಾರಿ ಅವರಿಗೆ ಬ್ರೇಕ್‍ ಕೊಡುವುದಕ್ಕೆ ಹೊರಟಿರುವವರು ನಟ-ನಿರ್ದೇಶಕ ಅರ್ಜುನ್‍ ಸರ್ಜಾ. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪ್ರೇಮ ಬರಹ’ ಚಿತ್ರದ ನಂತರ ಅವರು ಕನ್ನಡದಲ್ಲಿ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಇನ್ನು, ನಟನೆಯಿಂದಲೂ ದೂರವೇ ಇದ್ದರು.

ಇದೀಗ ಅರ್ಜುನ್‍ ಸರ್ಜಾ, ನಿರಂಜನ್‍ ಸುಧೀಂದ್ರ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ. ಈ ಚಿತ್ರವನ್ನು ಅವರು ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ತಮ್ಮ ಶ್ರೀ ರಾಮ್‍ ಫಿಲಂಸ್ ಇಂಟರ್‍ನ್ಯಾಷನಲ್‍ ಸಂಸ್ಥೆಯಡಿ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರು ನಟಿಸುತ್ತಿದ್ದಾರೆ, ಕಥೆ ಏನು ಮುಂತಾದ ವಿಷಯಗಳನ್ನು ಅರ್ಜುನ್‍ ಸರ್ಜಾ ಸದ್ಯ ಬಿಟ್ಟುಕೊಟ್ಟಿಲ್ಲ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಇಂದು ( ಅಕ್ಟೋಬರ್‌ 16 ) ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಅರ್ಜುನ್‌ ಸರ್ಜಾ ತಮ್ಮ ಈ ಚಿತ್ರಕ್ಕೆ ʼಸೀತಾ ಪಯಣ ಎಂಬ ಹೆಸರನ್ನಿಟ್ಟಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು ಹಾಗೂ ತಮಿಳು ಭಾಷೆಗಳಲ್ಲಿಯೂ ಈ ಚಿತ್ರ ತೆರೆ ಕಾಣಲಿದ್ದು, ಅಲ್ಲಿ ʼಸೀತಾ ಪಯಣಂʼ ಎಂಬ ಹೆಸರಿನಡಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಅಂದಹಾಗೆ, ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’ ಚಿತ್ರಕ್ಕೆ ಅರ್ಜುನ್‍ ಸರ್ಜಾ ಕಥೆ, ಚಿತ್ರಕಥೆ ಬರೆದಿದ್ದು, ಆ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿಲ್ಲ.

ಭೂಮಿಕಾ

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

23 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

23 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

23 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

23 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

23 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

23 hours ago