ಮನರಂಜನೆ

ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ …

ಉಪೇಂದ್ರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್‍ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್‍ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಗಸ್ಟ್ 20ರಂದು ನಿರಂಜನ್‍ ಹುಟ್ಟುಹಬ್ಬವಿತ್ತು. ಈ ಸಂದರ್ಭದಲ್ಲಿ ಚಿತ್ರದ ಟೀಸರ್‍ ಬಿಡುಗಡೆ ಮಾಡುವ ಮೂಲಕ ಚಿತ್ರತಂಡದವರು ತಮ್ಮ ಚಿತ್ರದ ನಾಯಕನಿಗೆ ಶುಭ ಕೋರಿದ್ದಾರೆ. ಡಾ.ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸಿರುವ ಈ ಚಿತ್ರವನ್ನು ಮಹಾಂತೇಶ್‍ ಹಂದ್ರಾಳ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಒಂದು ಹಗರಣದ ಸುತ್ತ ಸಾಗುವ ಕಥೆಯನ್ನು ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ಸತ್ಯಕ್ಕಾಗಿ ನಿರಂಜನ್ ಹೋರಾಟ ಹೇಗಿದೆ ಅನ್ನೋದನ್ನು ಟೀಸರ್‍ನಲ್ಲಿ ತೋರಿಸಲಾಗಿದೆ.

‘ಸ್ಪಾರ್ಕ್‍’ ಕುರಿತು ಮಾತನಾಡುವ ನಿರಂಜನ್‍, ‘ಇದು ಎಲ್ಲರ ಮನಸ್ಸಿನಲ್ಲಿರುವ ಕಿಡಿ. ಏನೇ ಹಗರಣ, ಏನೇ ನಡೆದರು‌ ಮೊದಲು ಧ್ವನಿ ಎತ್ತುವುದು‌ ಪತ್ರಕರ್ತರು. ಅವರಿಗೆ ಸಿಗುವ ಗೌರವ ಕಡಿಮೆ. ನಾನು ಚಿತ್ರದಲ್ಲಿ ಪತ್ರಕರ್ತನ ಪಾತ್ರ ನಿರ್ವಹಿಸುತ್ತಿದ್ದೇನೆ. ಇದು ದೊಡ್ಡ ಜವಾಬ್ದಾರಿ. ಇದರಲ್ಲಿ ಬರವಣಿಗೆ ತುಂಬಾ ಸ್ಟ್ರಾಂಗ್ ಆಗಿದೆ. ಇದು ಹಗರಣ ಕಥಾಹಂದರ ಹೊಂದಿರುವ ಚಿತ್ರ. ಕಮರ್ಷಿಯಲ್ ಆಗಿ ಈ ಸಿನಿಮಾ ಮೂಡಿ ಬಂದಿದೆ’ ಎಂದರು.

‘ನೆನಪಿರಲಿ’ ಪ್ರೇಮ್ ಮಾತನಾಡಿ, ‘ನಾನು ಚಿತ್ರರಂಗಕ್ಕೆ ಮಾಸ್ ಹೀರೋ ಅಗಬೇಕು ಎಂದು ಬಂದೆ. ಆದರೆ, ಬ್ಯಾಕ್ ಟು ಬ್ಯಾಕ್ ಪ್ರೇಮಕಥೆಗಳಲ್ಲಿ ನಟಿಸಿದೆ. ಆ ಚಿತ್ರಗಳು ಯಶಸ್ವಿಯಾಗಿ, ನನ್ನ ಕ್ಲಾಸ್ ಹೀರೋ ಎಂದು ಬ್ರಾಂಡ್‍ ಮಾಡಿದರು. ನನ್ನಲ್ಲಿರುವ ಸ್ಪಾರ್ಕ್ ನೋಡಿ ಮಹಾಂತೇಶ್ ನನಗೆ ಮಾಸ್ ಪಾತ್ರವನ್ನು ಕೊಟ್ಟಿದ್ದಾರೆ’ ಎಂದರು.

ನಿರ್ದೇಶಕ ಮಹಾಂತೇಶ್ ಮಾತನಾಡಿ, ‘’ಸ್ಪಾರ್ಕ್’ ಒಂದು ಹಗರಣದ ಕುರಿತಾದ ಚಿತ್ರ. ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಸಚಿನ್ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ’ ಎಂದರು.

‘ಸ್ಪಾರ್ಕ್’ ಚಿತ್ರದಲ್ಲಿ ನಿರಂಜನ್‍ಗೆ ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ರಮೇಶ್ ಇಂದಿರಾ, ಧರ್ಮಣ್ಣ ಕಡೂರು, ಸಾಧು ಕೋಕಿಲಾ, ಬಲ ರಾಜವಾಡಿ ಮುಂತಾದವರು ನಟಿಸುತ್ತಿದ್ದಾರೆ. ಈಗಾಗಲೇ ಶೇ. 60ರಷ್ಟು ಚಿತ್ರೀಕರಣ ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ಚಿತ್ರೀಕರಣ ಮುಗಿದು, ಈ ವರ್ಷ ಚಿತ್ರ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

6 mins ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

1 hour ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

1 hour ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

2 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

2 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

2 hours ago