prem new movie
ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಆಗಸ್ಟ್ 20ರಂದು ನಿರಂಜನ್ ಹುಟ್ಟುಹಬ್ಬವಿತ್ತು. ಈ ಸಂದರ್ಭದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡದವರು ತಮ್ಮ ಚಿತ್ರದ ನಾಯಕನಿಗೆ ಶುಭ ಕೋರಿದ್ದಾರೆ. ಡಾ.ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸಿರುವ ಈ ಚಿತ್ರವನ್ನು ಮಹಾಂತೇಶ್ ಹಂದ್ರಾಳ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಒಂದು ಹಗರಣದ ಸುತ್ತ ಸಾಗುವ ಕಥೆಯನ್ನು ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ಸತ್ಯಕ್ಕಾಗಿ ನಿರಂಜನ್ ಹೋರಾಟ ಹೇಗಿದೆ ಅನ್ನೋದನ್ನು ಟೀಸರ್ನಲ್ಲಿ ತೋರಿಸಲಾಗಿದೆ.
‘ಸ್ಪಾರ್ಕ್’ ಕುರಿತು ಮಾತನಾಡುವ ನಿರಂಜನ್, ‘ಇದು ಎಲ್ಲರ ಮನಸ್ಸಿನಲ್ಲಿರುವ ಕಿಡಿ. ಏನೇ ಹಗರಣ, ಏನೇ ನಡೆದರು ಮೊದಲು ಧ್ವನಿ ಎತ್ತುವುದು ಪತ್ರಕರ್ತರು. ಅವರಿಗೆ ಸಿಗುವ ಗೌರವ ಕಡಿಮೆ. ನಾನು ಚಿತ್ರದಲ್ಲಿ ಪತ್ರಕರ್ತನ ಪಾತ್ರ ನಿರ್ವಹಿಸುತ್ತಿದ್ದೇನೆ. ಇದು ದೊಡ್ಡ ಜವಾಬ್ದಾರಿ. ಇದರಲ್ಲಿ ಬರವಣಿಗೆ ತುಂಬಾ ಸ್ಟ್ರಾಂಗ್ ಆಗಿದೆ. ಇದು ಹಗರಣ ಕಥಾಹಂದರ ಹೊಂದಿರುವ ಚಿತ್ರ. ಕಮರ್ಷಿಯಲ್ ಆಗಿ ಈ ಸಿನಿಮಾ ಮೂಡಿ ಬಂದಿದೆ’ ಎಂದರು.
‘ನೆನಪಿರಲಿ’ ಪ್ರೇಮ್ ಮಾತನಾಡಿ, ‘ನಾನು ಚಿತ್ರರಂಗಕ್ಕೆ ಮಾಸ್ ಹೀರೋ ಅಗಬೇಕು ಎಂದು ಬಂದೆ. ಆದರೆ, ಬ್ಯಾಕ್ ಟು ಬ್ಯಾಕ್ ಪ್ರೇಮಕಥೆಗಳಲ್ಲಿ ನಟಿಸಿದೆ. ಆ ಚಿತ್ರಗಳು ಯಶಸ್ವಿಯಾಗಿ, ನನ್ನ ಕ್ಲಾಸ್ ಹೀರೋ ಎಂದು ಬ್ರಾಂಡ್ ಮಾಡಿದರು. ನನ್ನಲ್ಲಿರುವ ಸ್ಪಾರ್ಕ್ ನೋಡಿ ಮಹಾಂತೇಶ್ ನನಗೆ ಮಾಸ್ ಪಾತ್ರವನ್ನು ಕೊಟ್ಟಿದ್ದಾರೆ’ ಎಂದರು.
ನಿರ್ದೇಶಕ ಮಹಾಂತೇಶ್ ಮಾತನಾಡಿ, ‘’ಸ್ಪಾರ್ಕ್’ ಒಂದು ಹಗರಣದ ಕುರಿತಾದ ಚಿತ್ರ. ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಸಚಿನ್ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ’ ಎಂದರು.
‘ಸ್ಪಾರ್ಕ್’ ಚಿತ್ರದಲ್ಲಿ ನಿರಂಜನ್ಗೆ ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ರಮೇಶ್ ಇಂದಿರಾ, ಧರ್ಮಣ್ಣ ಕಡೂರು, ಸಾಧು ಕೋಕಿಲಾ, ಬಲ ರಾಜವಾಡಿ ಮುಂತಾದವರು ನಟಿಸುತ್ತಿದ್ದಾರೆ. ಈಗಾಗಲೇ ಶೇ. 60ರಷ್ಟು ಚಿತ್ರೀಕರಣ ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ಚಿತ್ರೀಕರಣ ಮುಗಿದು, ಈ ವರ್ಷ ಚಿತ್ರ ಬಿಡುಗಡೆಯಾಗಲಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…