ಕನ್ನಡದ ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ದಾಂಪತ್ಯ ಜೀವನ ಇಂದಿಗೆ ಅಂತ್ಯವಾಗಿದೆ. ಹೌದು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಈ ಜೋಡಿಗೆ ಕೋರ್ಟ್ ಇಂದು ವಿಚ್ಛೇದನ ಮಂಜೂರು ಮಾಡಿದೆ. ಆ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುಗಿದಿದೆ.
ಕೆಲವೊಂದು ವೈಯಕ್ತಿಕ ಸಮಸ್ಯೆಗಳಿಂದ ಮುಕ್ತಿ ಹೊಂದುವ ಸಲುವಾಗಿ ಈ ಜೋಡಿ ವಿಚ್ಛೇದನ ಪಡೆಯಲು ಕೋರ್ಟ್ ಮೆಟ್ಟಿಲೇರಿತ್ತು. ಇದನ್ನು ಸಮ್ಮತಿಸಿದ ನ್ಯಾಯಾಲಯ ಇವರಿಗೆ ವಿಚ್ಛೇದನ ನೀಡಿ ಆದೇಶ ಹೊರಡಿಸಿದೆ.
ವಿಚ್ಛೇದನಕ್ಕಾಗಿ ಕಾಯುವ ಜೋಡಿಗಳಿಗೆ ವರ್ಷಾನುಗಟ್ಟಲೇ ಸಮಯ ತೆಗೆದುಕೊಳ್ಳುತ್ತವೆ. ಆದರೆ ಈ ಜೋಡಿಗೆ ಕೇವಲ ಒಂದೇ ದಿನದಲ್ಲಿ ವಿಚ್ಛೇದನ ಸಿಕ್ಕಿದೆ. ಇಬ್ಬರೂ ನಗು-ನಗುತ್ತಲೇ ಕೋರ್ಟ್ ಆವರಣಕ್ಕೆ ಬಂದು, ಸರದಿಯಲ್ಲಿ ಪಕ್ಕ-ಪಕ್ಕ ಕೂತು ಕೋರ್ಟ್ ನೀಡಿದ ತೀರ್ಪು ಆಲಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ.
ಈ ಸಂಬಂದ ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ ತೀರ್ಪು ನೀಡಿದೆ. ಸಿಕ್ಷನ್ 13B ಅಡಿಯಲ್ಲಿ ಇಬ್ಬರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ದೊರಕಿದೆ.
ಇನ್ನು ಈ ಇಬ್ಬರ ವಿಚ್ಛೇದನ ವಿಷಯಕ್ಕೆ ಸಂಬಂಧಿಸಿದಂತೆ, ಈ ಜೋಡಿಗೆ ಮಗು ಪಡೆಯುವ ವಿಷಯದಲ್ಲಿ ಆಗಾಗ್ಗೆ ಕಿರಿಕ್ ಆಗುತ್ತಲೇ ಇತ್ತಂತೆ. ಮದುವೆಯಾಗಿ ನಾಲ್ಕು ವರ್ಷಗಳು ಕಳೆದರು ಸಹಾ ಯಾವುದೇ ಮಗುವನ್ನು ಪಡೆದಿರಲಿಲ್ಲ. ಈ ವಿಚಾರಕ್ಕೆ ಇಬ್ಬರಿಗೂ ಜಗಳ ಆಗುತ್ತಿತ್ತು ಎನ್ನಲಾಗಿದ್ದು, ನಿವೇದಿತಾ ಅವರು ಮಗು ಪಡೆಯುವುದನ್ನು ನಿರಾಕರಿಸಿದ್ದರು ಎಂದು ಸ್ಯಾಂಡಲ್ವುಡ್ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ.
ಆದರೆ ವಿಚ್ಛೇದನ ಪಡೆದಿರುವ ದಂಪತಿಯೇ ಇದಕ್ಕೆ ಉತ್ತರ ನೀಡಬೇಕಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…