ಮನರಂಜನೆ

‘ಟೋಬಿ’ಯಲ್ಲಿ ಕಲಿತಷ್ಟು ಯಾವ ಚಿತ್ರದಲ್ಲೂ ಕಲಿತಿಲ್ಲ: ರಾಜ್‍ ಬಿ ಶೆಟ್ಟಿ

ರಾಜ್‍ ಬಿ ಶೆಟ್ಟಿ ಅಭಿನಯದ ಬಗ್ಗೆ ‘ಟೋಬಿ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇತ್ತು. ಆದರೆ, ಚಿತ್ರ ನಿರೀಕ್ಷೆ ಗೆಲುವು ಕಾಣಲಿಲ್ಲ. ಅದಕ್ಕೆ ಸರಿಯಾಗಿ ಚಿತ್ರದ ಬಗ್ಗೆಯೂ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಸೋಲಿನಿಂದ ರಾಜ್ ಶೆಟ್ಟಿ ಬಹಳಷ್ಟು ಪಾಠ ಕಲಿತಿರುವಂತೆ ಕಾಣುತ್ತದೆ. ಅವರೇ ಹೇಳಿಕೊಂಡಂತೆ ‘ಟೋಬಿ’ಯಲ್ಲಿ ಕಲಿತ ಬಗ್ಗೆ ಅವರು ಯಾವ ಚಿತ್ರದಲ್ಲೂ ಕಲಿತಿಲ್ಲವಂತೆ.

ಈ ಕುರಿತು ಇತ್ತೀಚೆಗೆ ಮಾತನಾಡಿರುವ ರಾಜ್‍, ‘ಸೋಲು ಬಹಳ ಸುಂದರ. ನಾನು ಕೆಲವು ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ‘ಟೋಬಿ’ಯಲ್ಲಿ ಕಲಿತಷ್ಟು ಯಾವ ಚಿತ್ರದಲ್ಲೂ ಕಲಿತಿಲ್ಲ. ‘ಟೋಬಿ’ ಸೋಲಿನಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಈ ಸೋಲಿನಿಂದ ಸ್ವಲ್ಪ ಹಿನ್ನೆಡೆ ಆಗಬಹುದು. ಗೆಲುವು ಆತ್ಮವಿಶ್ವಾಸ ಕೊಟ್ಟರೆ, ಸೋಲು ಹಲವು ಪ್ರಶ್ನೆಗಳನ್ನು ನಮ್ಮಲ್ಲಿ ಹುಟ್ಟುಹಾಕುತ್ತವೆ. ಎಲ್ಲಿ ತಪ್ಪು ಮಾಡಿದೆ? ನಾವೆಷ್ಟು ಬದಲಾಗಿದ್ದೇವೆ? ಇವೆಲ್ಲವೂ ಯೋಚಿಸುವಂತೆ ಮಾಡುತ್ತದೆ’ ಎನ್ನುತ್ತಾರೆ.

ಇವತ್ತಿನ ಈ ಎನರ್ಜಿಗೆ ‘ಟೋಬಿ’ ಚಿತ್ರದ ಸೋಲು ಕಾರಣ ಎನ್ನುವ ರಾಜ್‍, ‘ನಾವು ಆರಂಭದಲ್ಲಿ ಚಿತ್ರರಂಗಕ್ಕೆ ಬಂದಾಗ ಮುಗ್ಧರಾಗಿರುತ್ತೇವೆ. ಕ್ರಮೇಣ ನಮ್ಮಲ್ಲೊಂದು ಬದಲಾವಣೆ ಆಗುತ್ತದೆ. ನಾವು ಸೋತಾಗ, ನಮಗೆ ನಾವೇ ಎಲ್ಲಿ ಸೋತೆವು ಎಂದು ಪ್ರಶ್ನೆ ಮಾಡಿಕೊಂಡರೆ ಎಲ್ಲವೂ ಅರ್ಥವಾಗುತ್ತದೆ. ಈ ನಿಟ್ಟಿನಲ್ಲಿ ನಾನು ಸೋತಿದ್ದಕ್ಕೆ ನಾನು ಬಹಳ ಲಕ್ಕಿ ಎನ್ನಬೇಕು. ಸೋತಾಗ ಸ್ವಲ್ಪ ಕಷ್ಟವಾಗುವುದು ಹೌದು. ಆದರೆ, ಇವತ್ತಿನ ಈ ಎನರ್ಜಿಗೆ ‘ಟೋಬಿ’ ಚಿತ್ರದ ಸೋಲು ಕಾರಣ. ಆ ಚಿತ್ರ ಗೆದ್ದಿದ್ದರೆ, ನಾನು ಸಹ ಎರಡು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದೆನೇನೋ? ಅಷ್ಟರಲ್ಲಿ ಸೋತೆ. ಮುಂದೆ ತಪ್ಪಾದರೆ ಭಯವಿಲ್ಲ. ಇನ್ನೊಮ್ಮೆ ಪ್ರಯತ್ನ ಮಾಡೋಣ ಎಂಬ ಧೈರ್ಯ ಬರುತ್ತದೆ. ಸೋಲು ತುಂಬಾ ಸ್ವಾತಂತ್ರ್ಯ ಕೊಡುತ್ತದೆ’ ಎಂಬುದು ರಾಜ್‍ ಮಾತು.

‘ಟೋಬಿ’ ಸೋತರೂ, ಅದರಿಂದ ಒಬ್ಬ ನಟನಾಗಿ ಅವರಿಗೆ ಒಳ್ಳೆಯ ಅವಕಾಶಗಳು ಸಿಗುತ್ತಿವೆಯಂತೆ. ‘ಆ ಚಿತ್ರ ಕಮರ್ಷಿಯಲ್‍ ಆಗಿ ಗೆಲ್ಲದೇ ಇರಬಹುದು. ಒಬ್ಬ ನಟನಾಗಿ ನನಗೆ ಆ ಚಿತ್ರದ ನಂತರ ಬಹಳ ಒಳ್ಳೆಯ ಪಾತ್ರಗಳು ಸಿಗುತ್ತಿವೆ. ಮೊದಲ ಬಾರಿಗೆ ಏನೋ ಮಾಡಬಹುದು ಅಂತ ಅನಿಸುತ್ತಿದೆ. ಸದ್ಯ ‘45’ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಅದಲ್ಲದೆ ಇನ್ನೊಂದೆರಡು ಚಿತ್ರಗಳಲ್ಲಿ ನಟಿಸುತ್ತಿದ್ದೇನೆ. ಮಲಯಾಳಂನಿಂದ ಒಂದಿಷ್ಟು ಅವಕಾಶಗಳು ಬರುತ್ತಿವೆ. ಆದರೆ, ಸದ್ಯ ಅಲ್ಲಿಗೆ ಹೋಗಿ ನಟಿಸುವಷ್ಟು ಪುರುಸೊತ್ತಿಲ್ಲ. ಇದಲ್ಲದೆ ಒಂದು ವೆಬ್‍ ಸೀರೀಸ್ ಸಹ ಮಾಡುತ್ತಿದ್ದೀನಿ’ ಎಂದು ಅವರು ಮಾಹಿತಿ ಕೊಡುತ್ತಾರೆ.

ಭೂಮಿಕಾ

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

4 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

4 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

4 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

4 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

4 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

4 hours ago