ಮನರಂಜನೆ

‘ಟೋಬಿ’ಯಲ್ಲಿ ಕಲಿತಷ್ಟು ಯಾವ ಚಿತ್ರದಲ್ಲೂ ಕಲಿತಿಲ್ಲ: ರಾಜ್‍ ಬಿ ಶೆಟ್ಟಿ

ರಾಜ್‍ ಬಿ ಶೆಟ್ಟಿ ಅಭಿನಯದ ಬಗ್ಗೆ ‘ಟೋಬಿ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇತ್ತು. ಆದರೆ, ಚಿತ್ರ ನಿರೀಕ್ಷೆ ಗೆಲುವು ಕಾಣಲಿಲ್ಲ. ಅದಕ್ಕೆ ಸರಿಯಾಗಿ ಚಿತ್ರದ ಬಗ್ಗೆಯೂ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಸೋಲಿನಿಂದ ರಾಜ್ ಶೆಟ್ಟಿ ಬಹಳಷ್ಟು ಪಾಠ ಕಲಿತಿರುವಂತೆ ಕಾಣುತ್ತದೆ. ಅವರೇ ಹೇಳಿಕೊಂಡಂತೆ ‘ಟೋಬಿ’ಯಲ್ಲಿ ಕಲಿತ ಬಗ್ಗೆ ಅವರು ಯಾವ ಚಿತ್ರದಲ್ಲೂ ಕಲಿತಿಲ್ಲವಂತೆ.

ಈ ಕುರಿತು ಇತ್ತೀಚೆಗೆ ಮಾತನಾಡಿರುವ ರಾಜ್‍, ‘ಸೋಲು ಬಹಳ ಸುಂದರ. ನಾನು ಕೆಲವು ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ‘ಟೋಬಿ’ಯಲ್ಲಿ ಕಲಿತಷ್ಟು ಯಾವ ಚಿತ್ರದಲ್ಲೂ ಕಲಿತಿಲ್ಲ. ‘ಟೋಬಿ’ ಸೋಲಿನಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಈ ಸೋಲಿನಿಂದ ಸ್ವಲ್ಪ ಹಿನ್ನೆಡೆ ಆಗಬಹುದು. ಗೆಲುವು ಆತ್ಮವಿಶ್ವಾಸ ಕೊಟ್ಟರೆ, ಸೋಲು ಹಲವು ಪ್ರಶ್ನೆಗಳನ್ನು ನಮ್ಮಲ್ಲಿ ಹುಟ್ಟುಹಾಕುತ್ತವೆ. ಎಲ್ಲಿ ತಪ್ಪು ಮಾಡಿದೆ? ನಾವೆಷ್ಟು ಬದಲಾಗಿದ್ದೇವೆ? ಇವೆಲ್ಲವೂ ಯೋಚಿಸುವಂತೆ ಮಾಡುತ್ತದೆ’ ಎನ್ನುತ್ತಾರೆ.

ಇವತ್ತಿನ ಈ ಎನರ್ಜಿಗೆ ‘ಟೋಬಿ’ ಚಿತ್ರದ ಸೋಲು ಕಾರಣ ಎನ್ನುವ ರಾಜ್‍, ‘ನಾವು ಆರಂಭದಲ್ಲಿ ಚಿತ್ರರಂಗಕ್ಕೆ ಬಂದಾಗ ಮುಗ್ಧರಾಗಿರುತ್ತೇವೆ. ಕ್ರಮೇಣ ನಮ್ಮಲ್ಲೊಂದು ಬದಲಾವಣೆ ಆಗುತ್ತದೆ. ನಾವು ಸೋತಾಗ, ನಮಗೆ ನಾವೇ ಎಲ್ಲಿ ಸೋತೆವು ಎಂದು ಪ್ರಶ್ನೆ ಮಾಡಿಕೊಂಡರೆ ಎಲ್ಲವೂ ಅರ್ಥವಾಗುತ್ತದೆ. ಈ ನಿಟ್ಟಿನಲ್ಲಿ ನಾನು ಸೋತಿದ್ದಕ್ಕೆ ನಾನು ಬಹಳ ಲಕ್ಕಿ ಎನ್ನಬೇಕು. ಸೋತಾಗ ಸ್ವಲ್ಪ ಕಷ್ಟವಾಗುವುದು ಹೌದು. ಆದರೆ, ಇವತ್ತಿನ ಈ ಎನರ್ಜಿಗೆ ‘ಟೋಬಿ’ ಚಿತ್ರದ ಸೋಲು ಕಾರಣ. ಆ ಚಿತ್ರ ಗೆದ್ದಿದ್ದರೆ, ನಾನು ಸಹ ಎರಡು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದೆನೇನೋ? ಅಷ್ಟರಲ್ಲಿ ಸೋತೆ. ಮುಂದೆ ತಪ್ಪಾದರೆ ಭಯವಿಲ್ಲ. ಇನ್ನೊಮ್ಮೆ ಪ್ರಯತ್ನ ಮಾಡೋಣ ಎಂಬ ಧೈರ್ಯ ಬರುತ್ತದೆ. ಸೋಲು ತುಂಬಾ ಸ್ವಾತಂತ್ರ್ಯ ಕೊಡುತ್ತದೆ’ ಎಂಬುದು ರಾಜ್‍ ಮಾತು.

‘ಟೋಬಿ’ ಸೋತರೂ, ಅದರಿಂದ ಒಬ್ಬ ನಟನಾಗಿ ಅವರಿಗೆ ಒಳ್ಳೆಯ ಅವಕಾಶಗಳು ಸಿಗುತ್ತಿವೆಯಂತೆ. ‘ಆ ಚಿತ್ರ ಕಮರ್ಷಿಯಲ್‍ ಆಗಿ ಗೆಲ್ಲದೇ ಇರಬಹುದು. ಒಬ್ಬ ನಟನಾಗಿ ನನಗೆ ಆ ಚಿತ್ರದ ನಂತರ ಬಹಳ ಒಳ್ಳೆಯ ಪಾತ್ರಗಳು ಸಿಗುತ್ತಿವೆ. ಮೊದಲ ಬಾರಿಗೆ ಏನೋ ಮಾಡಬಹುದು ಅಂತ ಅನಿಸುತ್ತಿದೆ. ಸದ್ಯ ‘45’ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಅದಲ್ಲದೆ ಇನ್ನೊಂದೆರಡು ಚಿತ್ರಗಳಲ್ಲಿ ನಟಿಸುತ್ತಿದ್ದೇನೆ. ಮಲಯಾಳಂನಿಂದ ಒಂದಿಷ್ಟು ಅವಕಾಶಗಳು ಬರುತ್ತಿವೆ. ಆದರೆ, ಸದ್ಯ ಅಲ್ಲಿಗೆ ಹೋಗಿ ನಟಿಸುವಷ್ಟು ಪುರುಸೊತ್ತಿಲ್ಲ. ಇದಲ್ಲದೆ ಒಂದು ವೆಬ್‍ ಸೀರೀಸ್ ಸಹ ಮಾಡುತ್ತಿದ್ದೀನಿ’ ಎಂದು ಅವರು ಮಾಹಿತಿ ಕೊಡುತ್ತಾರೆ.

ಭೂಮಿಕಾ

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

3 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

3 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

4 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

5 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

5 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

5 hours ago