ಮನರಂಜನೆ

ಸಿನಿಮಾಗೆ ಬಜೆಟ್ ಮುಖ್ಯ ಅಲ್ಲ ಕಥೆ ಮುಖ್ಯ: ಶಿವಣ್ಣ

‘ಒಂದು ಚಿತ್ರಕ್ಕೆ ಕಥೆ ಮುಖ್ಯವೇ ಹೊರತು ಬಜೆಟ್‍ ಅಲ್ಲ. ಕಥೆಯಲ್ಲಿ ಏನು ಹೇಳೋಕೆ ಹೊರಟಿದ್ದೀವಿ ಅನ್ನೋದು ಮುಖ‍್ಯವೇ ಹೊರತು ಖರ್ಚು ಮಾಡೋದು ಮುಖ್ಯ ಅಲ್ಲ’ ಎಂದು ಶಿವರಾಜಕುಮಾರ್‍ ಹೇಳಿದ್ದಾರೆ.

‘ಕೆಂಡಸಂಪಿಗೆ’ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗಿಯೂ ನಟಿಸಿರುವ ‘ಕಾಲಾಪತ್ಥರ್’ ಚಿತ್ರದ ಟ್ರೇಲರ್, ಇತ್ತೀಚೆಗೆ ಲುಲು ಮಾಲ್‍ನಲ್ಲಿ ಬಿಡುಗಡೆಯಾಗಿದೆ. ಶಿವರಾಜಕುಮಾರ್ ‍ಮುಖ್ಯ ಅತಿಥಿಯಾಗಿ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ವಿನಯ್‍ ರಾಜಕುಮಾರ್‍, ಟಿ.ಎಸ್. ನಾಗಾಭರಣ, ಪೂರ್ಣಿಮಾ ರಾಮ್‍ಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಚಿತ್ರತಂಡದವರು ಶಿವರಾಜಕುಮಾರ್‍ ಅವರಿಗೆ ಬೆಳ್ಳಿ ಗದೆಯನ್ನು ಉಡುಗೊರೆಯನ್ನಾಗಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜಕುಮಾರ್‍, ‘ಟ್ರೇಲರ್‍ ಬಹಳ ಚೆನ್ನಾಗಿದೆ. ನಿರೀಕ್ಷೆಗೂ ಮೀರಿ ಬೇರೆ ಲೆವೆಲ್‍ನಲ್ಲಿದೆ. ವಿಕ್ಕಿ, ’ಕಡ್ಡಿಪುಡಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದರು. ಚಿಕ್ಕ ಪಾತ್ರವನ್ನೂ ಮಾಡಿದ್ದರು. ನಂತರ ‘ಕೆಂಡಸಂಪಿಗೆ’ ಚಿತ್ರದಲ್ಲಿ ನಟಿಸಿದ್ದರು. ಆಮೇಲೆ ‘ಕಾಲೇಜ್‍ ಕುಮಾರ್’ ಚಿತ್ರದಲ್ಲಿ ನಟಿಸಿದ್ದರು. ಈಗ ‘ಕಾಲಾಪತ್ಥರ್’ ಮಾಡಿದ್ದಾರೆ. ಮೂರೂ ಚಿತ್ರದಲ್ಲಿ ‘ಕೆ’ ಎನ್ನುವ ಅಕ್ಷರವನ್ನು ಬಿಟ್ಟಿಲ್ಲ. ‘ಕಾಲಾ ಪತ್ಥರ್‍’ ನನ್ನ ಮೆಚ್ಚಿನ ಟೈಟಲ್‍. ನಾನು ಅಮಿತಾಬ್‍ ಬಚ್ಚನ್ ಅವರ ಅಭಿಮಾನಿ. ಇದೇ ಹೆಸರಿನ ಅವರ ಸಿನಿಮಾ ಬಂದಿತ್ತು. ಆ ಲೆವೆಲ್‍ಗೆ ಈ ಚಿತ್ರ ಗೆಲ್ಲಲಿ’ ಎಂದು ಹಾರೈಸಿದರು.

ಇನ್ನು, ದೊಡ್ಡ ಬಜೆಟ್, ಸಣ್ಣ ಬಜೆಟ್‍ ಎಂಬುದೆಲ್ಲಾ ಏನೂ ಇಲ್ಲ ಎಂದ ಶಿವರಾಜಕುಮಾರ್, ‘ಈ ಜಗತ್ತಿನಲ್ಲಿ ಚಿಕ್ಕ ಸಿನಿಮಾ ಅಂತಿಲ್ಲ. ಸಣ್ಣ ಬಜೆಟ್‍ನ ಸಿನಿಮಾ ಸಹ ಸಿನಿಮಾನೇ. ನೂರಾರು ಕೋಟಿ ಹಾಕಿ ಮಾಡಿದರೆ ಮಾತ್ರ ಅದು ಸಿನಿಮಾನಾ? ಖಂಡಿತಾ ಸುಳ್ಳು. ನಾವು ‘ಜನುಮದ ಜೋಡಿ’ ಮಾಡುವಾಗ 60 ಲಕ್ಷದಲ್ಲಿ ಮಾಡಿದ್ದೆವು. ಅದು ಅಷ್ಟರ ಮಟ್ಟಿಗೆ ಹಿಟ್‍ ಆಗುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಏನು ಹೇಳೋಕೆ ಹೊರಟಿದ್ದೀವಿ ಅನ್ನೋದು ಮುಖ‍್ಯವೇ ಹೊರತು, ಖರ್ಚು ಮಾಡೋದು ಮುಖ್ಯ ಅಲ್ಲ’ ಎಂದು ಹೇಳಿದರು.

‘ಕಾಲಾಪತ್ಥರ್’ ಚಿತ್ರವನ್ನು ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ನಿರ್ಮಿಸಿದ್ದಾರೆ. ಚಿತ್ರದಲ್ಲಿ ವಿಕ್ಕಿ ಮತ್ತು ಧನ್ಯಾ ರಾಮ್‍ಕುಮಾರ್‍ ಜೊತೆಗೆ ಟಿ.ಎಸ್. ನಾಗಾಭರಣ, ಅಚ್ಯುತ್‍ ಕುಮಾರ್‍, ರಾಜೇಶ್‍ ನಟರಂಗ ಮುಂತಾದವರು ನಟಿಸಿದ್ದು, ಸಂದೀಪ್‍ ಕುಮಾರ್‍ ಅವರ ಛಾಯಾಗ್ರಹಣವಿದೆ. ಅನೂಪ್‍ ಸೀಳಿನ್‍ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

5 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

10 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

10 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

10 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

10 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

11 hours ago