so muttanna
ಪ್ರಣಾಮ್ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗಲಿದೆ ಎಂದು ಈ ಹಿಂದೆ ಘೋಷಣೆಯಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ.
ಹೌದು, ಈ ಶುಕ್ರವಾರ ಬಿಡುಗಡೆ ಆಗಬೇಕಿದ್ದ ಪ್ರಣಮ್ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಸೆಪ್ಟೆಂಬರ್.12ಕ್ಕೆ ಮುಂದೂಲ್ಪಟ್ಟಿದೆ. ಕನ್ನಡ, ತೆಲುಗು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಇನ್ನು, ಆಗಸ್ಟ್.22ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ.
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ‘S/O ಮುತ್ತಣ್ಣ’ ಚಿತ್ರಕ್ಕೆ ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ. ಶ್ರೀಕಾಂತ್ ಹುಣಸೂರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಗಿರಿ ಶಿವಣ್ಣ, ತಬಲಾ ನಾಣಿ, ಸುಧಾ ಬೆಳವಾಡಿ, ಸುಚೇಂದ್ರ ಪ್ರಸಾದ್ ಮುಂತಾದವರು ನಟಿಸಿದ್ದಾರೆ.
‘S/O ಮುತ್ತಣ್ಣ’ ಹೆಸರೇ ಹೇಳುವಂತೆ ತಂದೆ-ಮಗನ ಬಾಂಧವ್ಯದ ಕುರಿತಾದ ಚಿತ್ರ. ಈ ಚಿತ್ರದಲ್ಲಿ ಮುತ್ತಣ್ಣ, ಶಿವು ಎಂಬ ತಂದೆ-ಮಗನಾಗಿ ರಂಗಾಯಣ ರಘು ಹಾಗೂ ಪ್ರಣಮ್ ದೇವರಾಜ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಕ್ಷಿ ಎಂಬ ಪಾತ್ರದಲ್ಲಿ ಖುಷಿ ರವಿ ನಟಿಸಿದ್ದಾರೆ. ಚಿತ್ರಕ್ಕೆ ಬೆಂಗಳೂರು, ಕಾಶಿ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.
ಮನೆಯಲ್ಲಿ ಅಪ್ಪನ ಜೊತೆಗೆ ಹೇಗಿರುತ್ತೀನೋ, ಅದೇ ರೀತಿ ರಘು ಅವರ ಜೊತೆಗೂ ಇದ್ದೇನೆ ಎನ್ನುವ ಪ್ರಣಮ್, ‘ಈ ಚಿತ್ರದಲ್ಲಿ ನಟಿಸಿದ್ದಕ್ಕೆ ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳಲಿಲ್ಲ. ಮನೆಯಲ್ಲಿ ಅಪ್ಪನ ಜೊತೆಗೆ ಇರುವ ಹಾಗೆಯೇ ಇದ್ದೇನೆ. ಇದೊಂದು ತಂದೆ-ಮಗನ ಬಾಂಧವ್ಯದ ಚಿತ್ರ. ಜೊತೆಗೆ ಪ್ರೇಮ ಕಥಾನಕವೂ ಹೌದು. ಈ ಚಿತ್ರದ ವಿಶೇಷವೆಂದರೆ ಇದರಲ್ಲಿ ಸಾಹಸ ಸನ್ನಿವೇಶಗಳಿಲ್ಲ’ ಎನ್ನುತ್ತಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…