ಮನರಂಜನೆ

ಪ್ಯಾನ್‍ ಇಂಡಿಯಾ ಅಲ್ಲ, ಇನ್ಮುಂದೆ ತೆಲುಗು ಇಂಡಿಯಾ

ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್‍, ರಾಮ್‍ಚರಣ್‍ ತೇಜ, ಜ್ಯೂನಿಯರ್‍ ಎನ್‍.ಟಿ.ಆರ್‍ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್‍ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ ದೇಶವಷ್ಟೇ ಅಲ್ಲ, ಬೇರೆ ದೇಶಗಳಲ್ಲೂ ಸಾಕಷ್ಟು ಡಿಮ್ಯಾಂಡ್‍ ಇದೆ. ‘ಹಾಗಾಗಿ ಇನ್ನು ಮುಂದೆ ಪ್ಯಾನ್‍ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಕರೆಯುವುದು ಸೂಕ್ತ ಎಂದು ನಿರ್ದೇಶಕ ರಾಮ್‍ ಗೋಪಾಲ್‍ ವರ್ಮ ಹೇಳಿದ್ದಾರೆ.

ವರ್ಮ ತಮ್ಮ ಟ್ವೀಟ್‍ಗಳಿಗೆ ಬಹಳ ಜನಪ್ರಿಯರು. ಮನಸ್ಸಿನಲ್ಲಿದ್ದುದನ್ನು ಯಾವುದೇ ಮುಚ್ಚುಮರೆ ಇಲ್ಲದೆ ನೇರವಾಗಿ ಟ್ವೀಟ್‍ ಮಾಡುತ್ತಾ ಬಂದಿದ್ದಾರೆ. ಅದೇ ಕಾರಣಕ್ಕೆ ಸಾಕಷ್ಟು ಟೀಕೆಗಳನ್ನು ಅವರು ಎದುರಿಸಿದ್ದಾರೆ. ಈಗ ಅವರು ತೆಲುಗು ನಟರು ಹೇಗೆ ಇಡೀ ದೇಶದಲ್ಲಿ ತಮ್ಮ ಚಿತ್ರಗಳಿಂದ ಮಿಂಚುತ್ತಿದ್ದಾರೆ ಎಂಬುದನ್ನು ಅವರು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಅಲ್ಲು ಅರ್ಜುನ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಪುಷ್ಪ 2’ ಬಿಡುಗಡೆಯಾಗಿ, ಭಾರತದ ಹಿಂದಿನ ಎಲ್ಲಾ ಬಾಕ್ಸ್ ಆಫೀಸ್‍ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರ ಶಾರೂಖ್ ಖಾನ್‍ ಅಭಿನಯದ ‘ಜವಾನ್‍’ ಆಗಿತ್ತು. ಆ ದಾಖಲೆಯನ್ನು ‘ಪುಷ್ಪ 2’ ಇದೀಗ ಮುರಿದು ಹಾಕಿದೆ. ಚಿತ್ರವು ಮೊದಲ ನಾಲ್ಕು ದಿನಗಳಲ್ಲಿ ಜಗತ್ತಿನಾದ್ಯಂತ 800 ಕೋಟಿ ರೂ. ಸಂಪಾದಿಸಿದೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ವರ್ಮ, ‘ಬಾಲಿವುಡ್‍ ಇತಿಹಾಸದಲ್ಲಿ ಅತ್ಯಂತ ಗಳಿಕೆ ಮಾಡಿದ ಸಿನಿಮಾ ಎಂದರೆ ಅದು ತೆಲುಗಿನಿಂದ ಡಬ್‍ ಆದ ‘ಪುಷ್ಪ 2’. ಬಾಲಿವುಡ್‍ ಇತಿಹಾಸದಲ್ಲಿ ಅತ್ಯಂತ ದೊಡ್ಡ ಹೀರೋ ಎಂದರೆ, ಅದು ಹಿಂದಿ ಮಾತನಾಡಲು ಬರದ ತೆಲುಗು ನಟ ನಟ ಅಲ್ಲು ಅರ್ಜುನ್‍. ಹಾಗಾಗಿ, ಇನ್ನು ಮುಂದೆ ಪ್ಯಾನ್‍ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಬರೆದುಕೊಂಡಿದ್ದಾರೆ.

ರಾಮ್ ಗೋಪಾಲ್‍ ವರ್ಮ ಅವರ ಟ್ವೀಟ್‍ಗೆ ನೆಟ್ಟಿಗರಿಂದ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

43 mins ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

60 mins ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

1 hour ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

2 hours ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

2 hours ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

3 hours ago