ಮನರಂಜನೆ

ಪ್ಯಾನ್‍ ಇಂಡಿಯಾ ಅಲ್ಲ, ಇನ್ಮುಂದೆ ತೆಲುಗು ಇಂಡಿಯಾ

ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್‍, ರಾಮ್‍ಚರಣ್‍ ತೇಜ, ಜ್ಯೂನಿಯರ್‍ ಎನ್‍.ಟಿ.ಆರ್‍ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್‍ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ ದೇಶವಷ್ಟೇ ಅಲ್ಲ, ಬೇರೆ ದೇಶಗಳಲ್ಲೂ ಸಾಕಷ್ಟು ಡಿಮ್ಯಾಂಡ್‍ ಇದೆ. ‘ಹಾಗಾಗಿ ಇನ್ನು ಮುಂದೆ ಪ್ಯಾನ್‍ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಕರೆಯುವುದು ಸೂಕ್ತ ಎಂದು ನಿರ್ದೇಶಕ ರಾಮ್‍ ಗೋಪಾಲ್‍ ವರ್ಮ ಹೇಳಿದ್ದಾರೆ.

ವರ್ಮ ತಮ್ಮ ಟ್ವೀಟ್‍ಗಳಿಗೆ ಬಹಳ ಜನಪ್ರಿಯರು. ಮನಸ್ಸಿನಲ್ಲಿದ್ದುದನ್ನು ಯಾವುದೇ ಮುಚ್ಚುಮರೆ ಇಲ್ಲದೆ ನೇರವಾಗಿ ಟ್ವೀಟ್‍ ಮಾಡುತ್ತಾ ಬಂದಿದ್ದಾರೆ. ಅದೇ ಕಾರಣಕ್ಕೆ ಸಾಕಷ್ಟು ಟೀಕೆಗಳನ್ನು ಅವರು ಎದುರಿಸಿದ್ದಾರೆ. ಈಗ ಅವರು ತೆಲುಗು ನಟರು ಹೇಗೆ ಇಡೀ ದೇಶದಲ್ಲಿ ತಮ್ಮ ಚಿತ್ರಗಳಿಂದ ಮಿಂಚುತ್ತಿದ್ದಾರೆ ಎಂಬುದನ್ನು ಅವರು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಅಲ್ಲು ಅರ್ಜುನ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಪುಷ್ಪ 2’ ಬಿಡುಗಡೆಯಾಗಿ, ಭಾರತದ ಹಿಂದಿನ ಎಲ್ಲಾ ಬಾಕ್ಸ್ ಆಫೀಸ್‍ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರ ಶಾರೂಖ್ ಖಾನ್‍ ಅಭಿನಯದ ‘ಜವಾನ್‍’ ಆಗಿತ್ತು. ಆ ದಾಖಲೆಯನ್ನು ‘ಪುಷ್ಪ 2’ ಇದೀಗ ಮುರಿದು ಹಾಕಿದೆ. ಚಿತ್ರವು ಮೊದಲ ನಾಲ್ಕು ದಿನಗಳಲ್ಲಿ ಜಗತ್ತಿನಾದ್ಯಂತ 800 ಕೋಟಿ ರೂ. ಸಂಪಾದಿಸಿದೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ವರ್ಮ, ‘ಬಾಲಿವುಡ್‍ ಇತಿಹಾಸದಲ್ಲಿ ಅತ್ಯಂತ ಗಳಿಕೆ ಮಾಡಿದ ಸಿನಿಮಾ ಎಂದರೆ ಅದು ತೆಲುಗಿನಿಂದ ಡಬ್‍ ಆದ ‘ಪುಷ್ಪ 2’. ಬಾಲಿವುಡ್‍ ಇತಿಹಾಸದಲ್ಲಿ ಅತ್ಯಂತ ದೊಡ್ಡ ಹೀರೋ ಎಂದರೆ, ಅದು ಹಿಂದಿ ಮಾತನಾಡಲು ಬರದ ತೆಲುಗು ನಟ ನಟ ಅಲ್ಲು ಅರ್ಜುನ್‍. ಹಾಗಾಗಿ, ಇನ್ನು ಮುಂದೆ ಪ್ಯಾನ್‍ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಬರೆದುಕೊಂಡಿದ್ದಾರೆ.

ರಾಮ್ ಗೋಪಾಲ್‍ ವರ್ಮ ಅವರ ಟ್ವೀಟ್‍ಗೆ ನೆಟ್ಟಿಗರಿಂದ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

27 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

31 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

36 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

42 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago