ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್, ರಾಮ್ಚರಣ್ ತೇಜ, ಜ್ಯೂನಿಯರ್ ಎನ್.ಟಿ.ಆರ್ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ ದೇಶವಷ್ಟೇ ಅಲ್ಲ, ಬೇರೆ ದೇಶಗಳಲ್ಲೂ ಸಾಕಷ್ಟು ಡಿಮ್ಯಾಂಡ್ ಇದೆ. ‘ಹಾಗಾಗಿ ಇನ್ನು ಮುಂದೆ ಪ್ಯಾನ್ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಕರೆಯುವುದು ಸೂಕ್ತ ಎಂದು ನಿರ್ದೇಶಕ ರಾಮ್ ಗೋಪಾಲ್ ವರ್ಮ ಹೇಳಿದ್ದಾರೆ.
ವರ್ಮ ತಮ್ಮ ಟ್ವೀಟ್ಗಳಿಗೆ ಬಹಳ ಜನಪ್ರಿಯರು. ಮನಸ್ಸಿನಲ್ಲಿದ್ದುದನ್ನು ಯಾವುದೇ ಮುಚ್ಚುಮರೆ ಇಲ್ಲದೆ ನೇರವಾಗಿ ಟ್ವೀಟ್ ಮಾಡುತ್ತಾ ಬಂದಿದ್ದಾರೆ. ಅದೇ ಕಾರಣಕ್ಕೆ ಸಾಕಷ್ಟು ಟೀಕೆಗಳನ್ನು ಅವರು ಎದುರಿಸಿದ್ದಾರೆ. ಈಗ ಅವರು ತೆಲುಗು ನಟರು ಹೇಗೆ ಇಡೀ ದೇಶದಲ್ಲಿ ತಮ್ಮ ಚಿತ್ರಗಳಿಂದ ಮಿಂಚುತ್ತಿದ್ದಾರೆ ಎಂಬುದನ್ನು ಅವರು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ 2’ ಬಿಡುಗಡೆಯಾಗಿ, ಭಾರತದ ಹಿಂದಿನ ಎಲ್ಲಾ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರ ಶಾರೂಖ್ ಖಾನ್ ಅಭಿನಯದ ‘ಜವಾನ್’ ಆಗಿತ್ತು. ಆ ದಾಖಲೆಯನ್ನು ‘ಪುಷ್ಪ 2’ ಇದೀಗ ಮುರಿದು ಹಾಕಿದೆ. ಚಿತ್ರವು ಮೊದಲ ನಾಲ್ಕು ದಿನಗಳಲ್ಲಿ ಜಗತ್ತಿನಾದ್ಯಂತ 800 ಕೋಟಿ ರೂ. ಸಂಪಾದಿಸಿದೆ.
ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ವರ್ಮ, ‘ಬಾಲಿವುಡ್ ಇತಿಹಾಸದಲ್ಲಿ ಅತ್ಯಂತ ಗಳಿಕೆ ಮಾಡಿದ ಸಿನಿಮಾ ಎಂದರೆ ಅದು ತೆಲುಗಿನಿಂದ ಡಬ್ ಆದ ‘ಪುಷ್ಪ 2’. ಬಾಲಿವುಡ್ ಇತಿಹಾಸದಲ್ಲಿ ಅತ್ಯಂತ ದೊಡ್ಡ ಹೀರೋ ಎಂದರೆ, ಅದು ಹಿಂದಿ ಮಾತನಾಡಲು ಬರದ ತೆಲುಗು ನಟ ನಟ ಅಲ್ಲು ಅರ್ಜುನ್. ಹಾಗಾಗಿ, ಇನ್ನು ಮುಂದೆ ಪ್ಯಾನ್ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಬರೆದುಕೊಂಡಿದ್ದಾರೆ.
ರಾಮ್ ಗೋಪಾಲ್ ವರ್ಮ ಅವರ ಟ್ವೀಟ್ಗೆ ನೆಟ್ಟಿಗರಿಂದ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…