ಮನರಂಜನೆ

ಪ್ಯಾನ್‍ ಇಂಡಿಯಾ ಅಲ್ಲ, ಇನ್ಮುಂದೆ ತೆಲುಗು ಇಂಡಿಯಾ

ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್‍, ರಾಮ್‍ಚರಣ್‍ ತೇಜ, ಜ್ಯೂನಿಯರ್‍ ಎನ್‍.ಟಿ.ಆರ್‍ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್‍ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ ದೇಶವಷ್ಟೇ ಅಲ್ಲ, ಬೇರೆ ದೇಶಗಳಲ್ಲೂ ಸಾಕಷ್ಟು ಡಿಮ್ಯಾಂಡ್‍ ಇದೆ. ‘ಹಾಗಾಗಿ ಇನ್ನು ಮುಂದೆ ಪ್ಯಾನ್‍ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಕರೆಯುವುದು ಸೂಕ್ತ ಎಂದು ನಿರ್ದೇಶಕ ರಾಮ್‍ ಗೋಪಾಲ್‍ ವರ್ಮ ಹೇಳಿದ್ದಾರೆ.

ವರ್ಮ ತಮ್ಮ ಟ್ವೀಟ್‍ಗಳಿಗೆ ಬಹಳ ಜನಪ್ರಿಯರು. ಮನಸ್ಸಿನಲ್ಲಿದ್ದುದನ್ನು ಯಾವುದೇ ಮುಚ್ಚುಮರೆ ಇಲ್ಲದೆ ನೇರವಾಗಿ ಟ್ವೀಟ್‍ ಮಾಡುತ್ತಾ ಬಂದಿದ್ದಾರೆ. ಅದೇ ಕಾರಣಕ್ಕೆ ಸಾಕಷ್ಟು ಟೀಕೆಗಳನ್ನು ಅವರು ಎದುರಿಸಿದ್ದಾರೆ. ಈಗ ಅವರು ತೆಲುಗು ನಟರು ಹೇಗೆ ಇಡೀ ದೇಶದಲ್ಲಿ ತಮ್ಮ ಚಿತ್ರಗಳಿಂದ ಮಿಂಚುತ್ತಿದ್ದಾರೆ ಎಂಬುದನ್ನು ಅವರು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಅಲ್ಲು ಅರ್ಜುನ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಪುಷ್ಪ 2’ ಬಿಡುಗಡೆಯಾಗಿ, ಭಾರತದ ಹಿಂದಿನ ಎಲ್ಲಾ ಬಾಕ್ಸ್ ಆಫೀಸ್‍ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರ ಶಾರೂಖ್ ಖಾನ್‍ ಅಭಿನಯದ ‘ಜವಾನ್‍’ ಆಗಿತ್ತು. ಆ ದಾಖಲೆಯನ್ನು ‘ಪುಷ್ಪ 2’ ಇದೀಗ ಮುರಿದು ಹಾಕಿದೆ. ಚಿತ್ರವು ಮೊದಲ ನಾಲ್ಕು ದಿನಗಳಲ್ಲಿ ಜಗತ್ತಿನಾದ್ಯಂತ 800 ಕೋಟಿ ರೂ. ಸಂಪಾದಿಸಿದೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ವರ್ಮ, ‘ಬಾಲಿವುಡ್‍ ಇತಿಹಾಸದಲ್ಲಿ ಅತ್ಯಂತ ಗಳಿಕೆ ಮಾಡಿದ ಸಿನಿಮಾ ಎಂದರೆ ಅದು ತೆಲುಗಿನಿಂದ ಡಬ್‍ ಆದ ‘ಪುಷ್ಪ 2’. ಬಾಲಿವುಡ್‍ ಇತಿಹಾಸದಲ್ಲಿ ಅತ್ಯಂತ ದೊಡ್ಡ ಹೀರೋ ಎಂದರೆ, ಅದು ಹಿಂದಿ ಮಾತನಾಡಲು ಬರದ ತೆಲುಗು ನಟ ನಟ ಅಲ್ಲು ಅರ್ಜುನ್‍. ಹಾಗಾಗಿ, ಇನ್ನು ಮುಂದೆ ಪ್ಯಾನ್‍ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಬರೆದುಕೊಂಡಿದ್ದಾರೆ.

ರಾಮ್ ಗೋಪಾಲ್‍ ವರ್ಮ ಅವರ ಟ್ವೀಟ್‍ಗೆ ನೆಟ್ಟಿಗರಿಂದ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago