ಮನರಂಜನೆ

ಸಂಖ್ಯೆ ತಾತ್ಕಾಲಿಕ, ಜನರ ಪ್ರೀತಿ ಮುಖ್ಯ; ‘ಪುಷ್ಪ 2’ ಯಶಸ್ಸಿನ ಬಗ್ಗೆ ಅಲ್ಲು ಅರ್ಜುನ್

ಟಾಲಿವುಡ್‍ ನಟ ಅಲ್ಲು ಅರ್ಜುನ್‍ ಜೀವನದಲ್ಲಿ, ಕಳೆದೊಂದು ವಾರದಲ್ಲಿ ಏನೆಲ್ಲಾ ಆಗಿ ಹೋಯ್ತು. ಕಳೆದ ವಾರವಷ್ಟೇ ‘ಪುಷ್ಪ 2’ ಚಿತ್ರ ಬಿಡುಗಡೆಯಾಯ್ತು. ಚಿತ್ರವು ಒಂದು ವಾರದಲ್ಲಿ ಸಾವಿರ ಕೋಟಿ ರೂ. ಗಳಿಕೆ ಮಾಡಿ, ಹೊಸ ದಾಖಲೆಯನ್ನೇ ನಿರ್ಮಿಸಿತು. ಅದಾಗುತ್ತಿದ್ದಂತೆಯೇ, ಚಿತ್ರದ ಬಿಡುಗಡೆ ಸಮಾರಂಭದಲ್ಲಿ ನಡೆದು ಒಂದು ದುರ್ಘಟನೆಯಿಂದ ಅರ್ಜುನ್‍, ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತಾಯಿತು.

ಅಲ್ಲು ಅರ್ಜುನ್‍, ಶುಕ್ರವಾರ ಅರೆಸ್ಟ್‍ ಆಗುವುದಕ್ಕಿಂತ ಮೊದಲು ಗುರುವಾರ, ನವದೆಹಲಿಯಲ್ಲಿ ನಡೆದು ‘ಪುಷ್ಪ 2’ ಚಿತ್ರದ ಯಶಸ್ಸಿನ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿರುವ ಅಲ್ಲು ಅರ್ಜುನ್‍, ಇದು ಬರೀ ತಂಡದ ಯಶಸ್ಸಲ್ಲ, ದೇಶದ ಯಶಸ್ಸು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಇದು ಬರೀ ನನ್ನ ಯಶಸ್ಸಲ್ಲ. ಇದು ನಮ್ಮ ದೇಶದ ಯಶಸ್ಸು. ಈ ಸಾವಿರ ಕೋಟಿ ಗಳಿಕೆ ಎನ್ನುವುದು ಜನರ ಪ್ರೀತಿಯ ಪ್ರತಿಬಿಂಬ. ಈ ಸಂಖ್ಯೆಗಳೆಲ್ಲಾ ತಾತ್ಕಾಲಿಕ. ಜನರ ಪ್ರೀತಿ ಬಹಳ ಮುಖ್ಯ. ದಾಖಲೆಗಳಿರುವುದೇ ಮುರಿಯುವುದಕ್ಕೆ. ಮುಂದಿನ ಎರಡ್ಮೂರು ತಿಂಗಳು, ಈ ದಾಖಲೆಗಳನ್ನು ನೋಡಿ ಖುಷಿಪಡುತ್ತೇನೆ. 2025ರ ಬೇಸಿಗೆಯ ಹೊತ್ತಿಗೆ, ಈ ದಾಖಲೆಗಳನ್ನು ಬೇರೊಂದು ಚಿತ್ರ ಮುರಿಯಬೇಕು ಎಂಬುದು ನನ್ನಾಸೆ’ ಎಂದರು.

ಇದು ಹೊಸ ಭಾರತ, ನಿಲ್ಲುವುದಿಲ್ಲ, ತಲೆ ಬಗಿಸುವುದಿಲ್ಲ ಎಂದಿರುವ ಅರ್ಜುನ್‍, ‘ಒಂದು ಭಾಷೆಯ ಚಿತ್ರವು ಹಲವು ರಾಜ್ಯಗಳಲ್ಲಿ ಯಶಸ್ವಿಯಾಗಿವೆ. ಇದು ಈ ದೇಶದಲ್ಲಿ ಜನ ಸಿನಿಮಾವನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಒಂದು ಸಣ್ಣ ಉದಾಹರಣೆ. ಮುಂದೊಂದು ದಿನ ಭಾರತವು ಜಗತ್ತಿನ ಭವಿಷ್ಯವನ್ನು ನಿರ್ಧರಿಸುತ್ತದೆ. ಭಾರತವು ಜಗತ್ತಿನ ಮುಂಚೂಣಿಯಲ್ಲಿರುವ ದೇಶವಾಗುತ್ತದೆ. ಇದು ಹೊಸ ಭಾರತ, ನಿಲ್ಲುವುದಿಲ್ಲ, ತಲೆ ಬಗಿಸುವುದಿಲ್ಲ’ ಎಂದು ಹೇಳಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿರುವ ಈ ಚಿತ್ರಕ್ಕೆ ಸುಕುಮಾರ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಜಗಪತಿ ಬಾಬು, ತಾರಕ್‍ ಪೊನ್ನಪ್ಪ, ರಾವ್‍ ರಮೇಶ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಭೂಮಿಕಾ

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

6 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago