ಮನರಂಜನೆ

ಪ್ರೇಮ್‍ ಒಬ್ಬ ಅತೃಪ್ತ ಆತ್ಮ ಎಂದ ಧ್ರುವ ಸರ್ಜಾ

ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಚಿತ್ರದ ಚಿತ್ರೀಕರಣ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಚಿತ್ರೀಕರಣವಾಗುತ್ತಲೇ ಇರುವ ಚಿತ್ರದ ಟೀಸರ್‌ ಇದೀಗ ಬಿಡುಗಡೆಯಾಗಿದ್ದು, ಈ ಸಮಾರಂಭದಲ್ಲಿ ಪ್ರೇಮ್‍ ಒಬ್ಬ ಅತೃಪ್ತ ಆತ್ಮ ಎಂದು ಧ್ರುವ ಸರ್ಜಾ ಬಣ್ಣಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕನ್ನಡದ ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಧ್ರುವ, ‘ಅಷ್ಟೊಂದು ಜನ ದೊಡ್ಡ ಕಲಾವಿದರ ಜೊತೆಗೆ ಕೆಲಸ ಮಾಡುವ ಅವಜಾಶ ಕೊಟ್ಟ ಕೆ.ವಿ.ಎನ್ ಸಂಸ್ಥೆಗೆ ಧನ್ಯವಾದ. ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಅವರಿಂದ ತುಂಬಾ ಕಲಿತಿದ್ದೇನೆ. ನಮ್ಮ ಸಿನಿಮಾದ ನಿಜವಾದ ಹೀರೋ ಅಂದರೆ ಅದು ನಿರ್ದೇಶಕ ಪ್ರೇಮ್. ಅವರದು ಒಂಥರಾ ಅತೃಪ್ತ ಆತ್ಮ. ಎಷ್ಟು ಕೆಲಸ ಮಾಡಿದರೂ ಅವರಿಗೆ ತೃಪ್ತಿ ಆಗಲ್ಲ. ಇನ್ನೂ ಒಂದು ಟೇಕ್‍ ಕೇಳುತ್ತಲೇ ಇರುತ್ತಾರೆ’ ಎಂದರು.

ನಿರ್ದೇಶಕ‌ ಪ್ರೇಮ್ ಮಾತನಾಡಿ, ‘ಕೆವಿಎನ್ ಸಂಸ್ಥೆ ಚಿತ್ರದ ಅದ್ದೂರಿತನದ ವಿಷಯದಲ್ಲಿ ಯಾವುದಕ್ಕೂ ಕೊರತೆ ಮಾಡಿಲ್ಲ. ನಿರ್ಮಾಪಕರೇ ನಮ್ಮ ಚಿತ್ರದ ನಿಜವಾದ ಹೀರೋ. ಅವರ ಸಿನಿಮಾ ಪ್ರೀತಿಗೆ ಧನ್ಯವಾದ. ಇದು 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ. ಕೆಡಿ ಅಂದ್ರೆ ಕಾಳಿದಾಸ ಎಂದರ್ಥ. ಆತ ಎಷ್ಟು ಮುಗ್ಧನೋ, ಅಷ್ಟೇ ರಾ ಆಗಿರುತ್ತಾನೆ. ಚಿತ್ರಕ್ಕೆ ಒಟ್ಟು 160 ರಿಂದ 180 ದಿನಗಳವರೆಗೆ ಶೂಟಿಂಗ್ ಮಾಡಿದ್ದೇವೆ. ಚಿತ್ರಕ್ಕೆ ಸಾಕಷ್ಟು ಕೆಲಸವಿದ್ದುದರಿಂದ ನಿಧಾನವಾಗಿದೆ ಎಂದನಿಸಬಹುದು. ಆದರೆ, ಅಷ್ಟೇನೂ ತಡವಾಗಿಲ್ಲ. ಚಿತ್ರವು ಇನ್ನು ಮೂರು ತಿಂಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ಹೇಳಿದರು.

‘ಕೆಡಿ – ದಿ ಡೆವಿಲ್‍’ ಚಿತ್ರದ ಸಮಾರಂಭದಲ್ಲಿ ಸಂಜಯ್‍ ದತ್‍, ರವಿಚಂದ್ರನ್‍, ರಮೇಶ್‍ ಅರವಿಂದ್‍, ಶಿಲ್ಪಾ ಶೆಟ್ಟಿ ಮುಂತಾದವರು ಹಾಜರಿದ್ದರು. ಚಿತ್ರಕ್ಕೆ ವಿಲಿಯಂ ಡೇವಿಡ್‍ ಛಾಯಾಗ್ರಹಣ ಮತ್ತು ಅರ್ಜುನ್‍ ಜನ್ಯ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

17 mins ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

22 mins ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

26 mins ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

9 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

10 hours ago