ಮನರಂಜನೆ

ಪ್ರೇಮ್‍ ಒಬ್ಬ ಅತೃಪ್ತ ಆತ್ಮ ಎಂದ ಧ್ರುವ ಸರ್ಜಾ

ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಚಿತ್ರದ ಚಿತ್ರೀಕರಣ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಚಿತ್ರೀಕರಣವಾಗುತ್ತಲೇ ಇರುವ ಚಿತ್ರದ ಟೀಸರ್‌ ಇದೀಗ ಬಿಡುಗಡೆಯಾಗಿದ್ದು, ಈ ಸಮಾರಂಭದಲ್ಲಿ ಪ್ರೇಮ್‍ ಒಬ್ಬ ಅತೃಪ್ತ ಆತ್ಮ ಎಂದು ಧ್ರುವ ಸರ್ಜಾ ಬಣ್ಣಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕನ್ನಡದ ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಧ್ರುವ, ‘ಅಷ್ಟೊಂದು ಜನ ದೊಡ್ಡ ಕಲಾವಿದರ ಜೊತೆಗೆ ಕೆಲಸ ಮಾಡುವ ಅವಜಾಶ ಕೊಟ್ಟ ಕೆ.ವಿ.ಎನ್ ಸಂಸ್ಥೆಗೆ ಧನ್ಯವಾದ. ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಅವರಿಂದ ತುಂಬಾ ಕಲಿತಿದ್ದೇನೆ. ನಮ್ಮ ಸಿನಿಮಾದ ನಿಜವಾದ ಹೀರೋ ಅಂದರೆ ಅದು ನಿರ್ದೇಶಕ ಪ್ರೇಮ್. ಅವರದು ಒಂಥರಾ ಅತೃಪ್ತ ಆತ್ಮ. ಎಷ್ಟು ಕೆಲಸ ಮಾಡಿದರೂ ಅವರಿಗೆ ತೃಪ್ತಿ ಆಗಲ್ಲ. ಇನ್ನೂ ಒಂದು ಟೇಕ್‍ ಕೇಳುತ್ತಲೇ ಇರುತ್ತಾರೆ’ ಎಂದರು.

ನಿರ್ದೇಶಕ‌ ಪ್ರೇಮ್ ಮಾತನಾಡಿ, ‘ಕೆವಿಎನ್ ಸಂಸ್ಥೆ ಚಿತ್ರದ ಅದ್ದೂರಿತನದ ವಿಷಯದಲ್ಲಿ ಯಾವುದಕ್ಕೂ ಕೊರತೆ ಮಾಡಿಲ್ಲ. ನಿರ್ಮಾಪಕರೇ ನಮ್ಮ ಚಿತ್ರದ ನಿಜವಾದ ಹೀರೋ. ಅವರ ಸಿನಿಮಾ ಪ್ರೀತಿಗೆ ಧನ್ಯವಾದ. ಇದು 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ. ಕೆಡಿ ಅಂದ್ರೆ ಕಾಳಿದಾಸ ಎಂದರ್ಥ. ಆತ ಎಷ್ಟು ಮುಗ್ಧನೋ, ಅಷ್ಟೇ ರಾ ಆಗಿರುತ್ತಾನೆ. ಚಿತ್ರಕ್ಕೆ ಒಟ್ಟು 160 ರಿಂದ 180 ದಿನಗಳವರೆಗೆ ಶೂಟಿಂಗ್ ಮಾಡಿದ್ದೇವೆ. ಚಿತ್ರಕ್ಕೆ ಸಾಕಷ್ಟು ಕೆಲಸವಿದ್ದುದರಿಂದ ನಿಧಾನವಾಗಿದೆ ಎಂದನಿಸಬಹುದು. ಆದರೆ, ಅಷ್ಟೇನೂ ತಡವಾಗಿಲ್ಲ. ಚಿತ್ರವು ಇನ್ನು ಮೂರು ತಿಂಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ಹೇಳಿದರು.

‘ಕೆಡಿ – ದಿ ಡೆವಿಲ್‍’ ಚಿತ್ರದ ಸಮಾರಂಭದಲ್ಲಿ ಸಂಜಯ್‍ ದತ್‍, ರವಿಚಂದ್ರನ್‍, ರಮೇಶ್‍ ಅರವಿಂದ್‍, ಶಿಲ್ಪಾ ಶೆಟ್ಟಿ ಮುಂತಾದವರು ಹಾಜರಿದ್ದರು. ಚಿತ್ರಕ್ಕೆ ವಿಲಿಯಂ ಡೇವಿಡ್‍ ಛಾಯಾಗ್ರಹಣ ಮತ್ತು ಅರ್ಜುನ್‍ ಜನ್ಯ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

1 hour ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

1 hour ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

1 hour ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

4 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

4 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago