ಮನರಂಜನೆ

ಪ್ರೇಮ್‍ ಒಬ್ಬ ಅತೃಪ್ತ ಆತ್ಮ ಎಂದ ಧ್ರುವ ಸರ್ಜಾ

ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಚಿತ್ರದ ಚಿತ್ರೀಕರಣ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಚಿತ್ರೀಕರಣವಾಗುತ್ತಲೇ ಇರುವ ಚಿತ್ರದ ಟೀಸರ್‌ ಇದೀಗ ಬಿಡುಗಡೆಯಾಗಿದ್ದು, ಈ ಸಮಾರಂಭದಲ್ಲಿ ಪ್ರೇಮ್‍ ಒಬ್ಬ ಅತೃಪ್ತ ಆತ್ಮ ಎಂದು ಧ್ರುವ ಸರ್ಜಾ ಬಣ್ಣಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕನ್ನಡದ ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಧ್ರುವ, ‘ಅಷ್ಟೊಂದು ಜನ ದೊಡ್ಡ ಕಲಾವಿದರ ಜೊತೆಗೆ ಕೆಲಸ ಮಾಡುವ ಅವಜಾಶ ಕೊಟ್ಟ ಕೆ.ವಿ.ಎನ್ ಸಂಸ್ಥೆಗೆ ಧನ್ಯವಾದ. ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಅವರಿಂದ ತುಂಬಾ ಕಲಿತಿದ್ದೇನೆ. ನಮ್ಮ ಸಿನಿಮಾದ ನಿಜವಾದ ಹೀರೋ ಅಂದರೆ ಅದು ನಿರ್ದೇಶಕ ಪ್ರೇಮ್. ಅವರದು ಒಂಥರಾ ಅತೃಪ್ತ ಆತ್ಮ. ಎಷ್ಟು ಕೆಲಸ ಮಾಡಿದರೂ ಅವರಿಗೆ ತೃಪ್ತಿ ಆಗಲ್ಲ. ಇನ್ನೂ ಒಂದು ಟೇಕ್‍ ಕೇಳುತ್ತಲೇ ಇರುತ್ತಾರೆ’ ಎಂದರು.

ನಿರ್ದೇಶಕ‌ ಪ್ರೇಮ್ ಮಾತನಾಡಿ, ‘ಕೆವಿಎನ್ ಸಂಸ್ಥೆ ಚಿತ್ರದ ಅದ್ದೂರಿತನದ ವಿಷಯದಲ್ಲಿ ಯಾವುದಕ್ಕೂ ಕೊರತೆ ಮಾಡಿಲ್ಲ. ನಿರ್ಮಾಪಕರೇ ನಮ್ಮ ಚಿತ್ರದ ನಿಜವಾದ ಹೀರೋ. ಅವರ ಸಿನಿಮಾ ಪ್ರೀತಿಗೆ ಧನ್ಯವಾದ. ಇದು 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ. ಕೆಡಿ ಅಂದ್ರೆ ಕಾಳಿದಾಸ ಎಂದರ್ಥ. ಆತ ಎಷ್ಟು ಮುಗ್ಧನೋ, ಅಷ್ಟೇ ರಾ ಆಗಿರುತ್ತಾನೆ. ಚಿತ್ರಕ್ಕೆ ಒಟ್ಟು 160 ರಿಂದ 180 ದಿನಗಳವರೆಗೆ ಶೂಟಿಂಗ್ ಮಾಡಿದ್ದೇವೆ. ಚಿತ್ರಕ್ಕೆ ಸಾಕಷ್ಟು ಕೆಲಸವಿದ್ದುದರಿಂದ ನಿಧಾನವಾಗಿದೆ ಎಂದನಿಸಬಹುದು. ಆದರೆ, ಅಷ್ಟೇನೂ ತಡವಾಗಿಲ್ಲ. ಚಿತ್ರವು ಇನ್ನು ಮೂರು ತಿಂಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ಹೇಳಿದರು.

‘ಕೆಡಿ – ದಿ ಡೆವಿಲ್‍’ ಚಿತ್ರದ ಸಮಾರಂಭದಲ್ಲಿ ಸಂಜಯ್‍ ದತ್‍, ರವಿಚಂದ್ರನ್‍, ರಮೇಶ್‍ ಅರವಿಂದ್‍, ಶಿಲ್ಪಾ ಶೆಟ್ಟಿ ಮುಂತಾದವರು ಹಾಜರಿದ್ದರು. ಚಿತ್ರಕ್ಕೆ ವಿಲಿಯಂ ಡೇವಿಡ್‍ ಛಾಯಾಗ್ರಹಣ ಮತ್ತು ಅರ್ಜುನ್‍ ಜನ್ಯ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

11 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

29 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

35 mins ago

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 day ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 day ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 day ago