ಮನರಂಜನೆ

ಓಂ ಪ್ರಕಾಶ್‍ ರಾವ್‍ ಹೊಸ ಚಿತ್ರಕ್ಕೆ ‘ಮಂಡ್ಯ ಸ್ಟಾರ್‍’ ಲೋಕಿ ನಾಯಕ

ಕನ್ನಡದ ಜನಪ್ರಿಯ ನಿರ್ದೇಶಕ ಓಂ ಪ್ರಕಾಶ್‍ ರಾವ್‍, ಕಳೆದ ವರ್ಷ ‘ಫೀನಿಕ್ಸ್’ ಎಂಬ ಹೊಸ ಚಿತ್ರದ ಮುಹೂರ್ತ ಮಾಡಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿಯುವುದರೊಳಗೆ, ಅವರು ಇನ್ನೂ ಒಂದು ಹೊಸ ಚಿತ್ರಕ್ಕೆ ಕಥೆ ಹಾಕಿದ್ದಾರೆ. ವಿಶೇಷವೆಂದರೆ, ಇದು ಅವರ ನಿರ್ದೇಶನದ 50ನೇ ಚಿತ್ರ.

ಈ ಹಿಂದೆ ‘ಮಂಡ್ಯ ಸ್ಟಾರ್‍’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿ, ‘ಮಂಡ್ಯ ಸ್ಟಾರ್‍’ ಎಂದೇ ಜನಪ್ರಿಯರಾಗಿರುವ ಲೋಕೇಶ್‍ ಅಲಿಯಾಸ್‍ ಲೋಕಿ, ಓಂಪ್ರಕಾಶ್‍ ರಾವ್‍ ಅವರ 50ನೇ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್ ಅಧಿಕೃತವಾಗಿ ಬಿಡುಗಡೆ ಆಗಿದ್ದು, ಚಿತ್ರೀಕರಣ ಜೂನ್‍ ತಿಂಗಳಿನಿಂದ ಪ್ರಾರಂಭವಾಗಲಿದೆ.

ಓಂಪ್ರಕಾಶ್ ‍ರಾವ್ ‍ನಿರ್ದೇಶನದ 50ನೇ ಚಿತ್ರದ ಹೆಸರು ‘ಗೆರಿಲ್ಲಾ ವಾರ್‍’. ಇದು ಐತಿಹಾಸಿಕ ಚಿತ್ರವಲ್ಲ ಎನ್ನುವ ಓಂಪ್ರಕಾಶ್ ರಾವ್, ‘’ಗೆರಿಲ್ಲಾ WAR’ ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಈ ವಿಷಯವನ್ನಿಟ್ಟುಕೊಂಡು ಈಗಿನ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಓಂಪ್ರಕಾಶ್ ರಾವ್‍ ಹೇಳಿದ್ದಾರೆ.

‘ಗೆರಿಲ್ಲಾ ವಾರ್‍’ ಚಿತ್ರದಲ್ಲಿ ಲೋಕಿ ಜೊತೆಗೆ ಅಚ್ಯುತ್ ಕುಮಾರ್, ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಸುಧಾ ಬೆಳವಾಡಿ, ಚಿತ್ರಾ ಶೆಣೈ, ಪೂಜಾ ಗೌಡ ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರವನ್ನು ಗಂಗಮ್ಮ ಎಂಟರ್ಪ್ರೈಸಸ್ ಲಾಂಛನದಲ್ಲಿ ರಮೇಶ್ ಅಬ್ಬನಕುಪ್ಪೆ (ಬಿಡದಿ) ಹಾಗೂ ಸ್ನೇಹಿತರು ನಿರ್ಮಿಸುತ್ತಿದ್ದಾರೆ.

ಓಂಪ್ರಕಾಶ್ ರಾವ್ ಅವರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ದೀಪು ಪಿ.ಆರ್ ಸಂಭಾಷಣೆ, ರವಿಕುಮಾರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago