ಮನರಂಜನೆ

‘ಟಾಕ್ಸಿಕ್’ ಬರಬೇಕಿದ್ದ ದಿನದಂದು ‘ವಿದ್ಯಾಪತಿ’ ಆಗಮನಕ್ಕೆ ಮುಹೂರ್ತ ಸಿಕ್ಕಾಯ್ತು

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ.

‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ ದಿನ ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಬಿಡುಗಡೆಯಾಬೇಕಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿಯದಿರುವುದರಿಂದ ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ. ಹೀಗಿರುವಾಗಲೇ, ಅದೇ ದಿನದಂದು ‘ವಿದ್ಯಾಪತಿ’ ಚಿತ್ರದ ಬಿಡುಗಡೆ ಘೋಷಣೆಯಾಗಿದೆ. ದೊಡ್ಡ ಚಿತ್ರವೊಂದು ಬಿಡುಗಡೆಯಾಗುತ್ತಿರುವ ಭಯದಲ್ಲಿ, ಆ ದಿನ ಚಿತ್ರ ಬಿಡುಗಡೆ ಮಾಡುವುದಕ್ಕೆ ಯಾರೂ ಮುಂದೆ ಬಂದಿರಲಿಲ್ಲ. ಯಾವಾಗ ‘ಟಾಕ್ಸಿಕ್‍’ ಬರುವುದು ಅನುಮಾನವಾಗಿದೆಯೋ, ಆ ಅವಕಾಶವನ್ನು ‘ವಿದ್ಯಾಪತಿ’ ತಂಡದವರು ಬಳಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಡಾಲಿ ಪಿಕ್ಚರ್ಸ್ ಸಂಸ್ಥೆಯಡಿ ‘ಟಗರು ಪಲ್ಯ’ ಚಿತ್ರದ ನಂತರ ಧನಂಜಯ್‍, ನಾಗಭೂಷಣ್‍ ಅಭಿನಯದಲ್ಲಿ ‘ವಿದ್ಯಾಪತಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‘ವಿದ್ಯಾಪತಿ’, ಡಾಲಿ ಪಿಕ್ಚರ್ಸ್‍ನ ನಾಲ್ಕನೇ ಚಿತ್ರ. ಕೆಲವು ವರ್ಷಗಳ ಹಿಂದೆ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾದ ‘ಇಕ್ಕಟ್’ ಚಿತ್ರವನ್ನು ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂ ಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ನಿಭಾಯಿಸಿದ್ದಾರೆ.

‘ವಿದ್ಯಾಪತಿ’ ಒಂದು ಕಾಮಿಡಿ ಚಿತ್ರವಾಗಿದ್ದು, ಇದರಲ್ಲಿ ನಾಗಭೂಷಣ್, ಕರಾಟೆ ಪಟುವಾಗಿ ನಟಿಸುತ್ತಿದ್ದಾರೆ. ಇನ್ನು, ಕರಾಟೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ನಾಯಕಿಯಾಗಿ ‘ಉಪಾಧ್ಯಕ್ಷ’ ಖ್ಯಾತಿಯ ಮಲೈಕಾ ಟಿ ವಸುಪಾಲ್, ನಾಗಭೂಷಣ್‍ಗೆ ಜೋಡಿಯಾಗಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈಗಾಗಲೇ ‘ವಿದ್ಯಾಪತಿ ಚಿತ್ರದ ‘ಅಯ್ಯೋ ವಿಧಿಯೇ …’ ಹಾಡು ಬಿಡುಗಡೆಯಾಗಿದ್ದು, ಸಾಕಷ್ಟು ಜನಪ್ರಿಯವಾಗಿದೆ. ಸದ್ಯದಲ್ಲೇ ಚಿತ್ರದ ಹಾಡುಗಳು ಮತ್ತು ಟೀಸರ್‍ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

10 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

10 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

10 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

10 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

10 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

10 hours ago