ಮನರಂಜನೆ

‘ಟಾಕ್ಸಿಕ್’ ಬರಬೇಕಿದ್ದ ದಿನದಂದು ‘ವಿದ್ಯಾಪತಿ’ ಆಗಮನಕ್ಕೆ ಮುಹೂರ್ತ ಸಿಕ್ಕಾಯ್ತು

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ.

‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ ದಿನ ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಬಿಡುಗಡೆಯಾಬೇಕಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿಯದಿರುವುದರಿಂದ ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ. ಹೀಗಿರುವಾಗಲೇ, ಅದೇ ದಿನದಂದು ‘ವಿದ್ಯಾಪತಿ’ ಚಿತ್ರದ ಬಿಡುಗಡೆ ಘೋಷಣೆಯಾಗಿದೆ. ದೊಡ್ಡ ಚಿತ್ರವೊಂದು ಬಿಡುಗಡೆಯಾಗುತ್ತಿರುವ ಭಯದಲ್ಲಿ, ಆ ದಿನ ಚಿತ್ರ ಬಿಡುಗಡೆ ಮಾಡುವುದಕ್ಕೆ ಯಾರೂ ಮುಂದೆ ಬಂದಿರಲಿಲ್ಲ. ಯಾವಾಗ ‘ಟಾಕ್ಸಿಕ್‍’ ಬರುವುದು ಅನುಮಾನವಾಗಿದೆಯೋ, ಆ ಅವಕಾಶವನ್ನು ‘ವಿದ್ಯಾಪತಿ’ ತಂಡದವರು ಬಳಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಡಾಲಿ ಪಿಕ್ಚರ್ಸ್ ಸಂಸ್ಥೆಯಡಿ ‘ಟಗರು ಪಲ್ಯ’ ಚಿತ್ರದ ನಂತರ ಧನಂಜಯ್‍, ನಾಗಭೂಷಣ್‍ ಅಭಿನಯದಲ್ಲಿ ‘ವಿದ್ಯಾಪತಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‘ವಿದ್ಯಾಪತಿ’, ಡಾಲಿ ಪಿಕ್ಚರ್ಸ್‍ನ ನಾಲ್ಕನೇ ಚಿತ್ರ. ಕೆಲವು ವರ್ಷಗಳ ಹಿಂದೆ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾದ ‘ಇಕ್ಕಟ್’ ಚಿತ್ರವನ್ನು ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂ ಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ನಿಭಾಯಿಸಿದ್ದಾರೆ.

‘ವಿದ್ಯಾಪತಿ’ ಒಂದು ಕಾಮಿಡಿ ಚಿತ್ರವಾಗಿದ್ದು, ಇದರಲ್ಲಿ ನಾಗಭೂಷಣ್, ಕರಾಟೆ ಪಟುವಾಗಿ ನಟಿಸುತ್ತಿದ್ದಾರೆ. ಇನ್ನು, ಕರಾಟೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ನಾಯಕಿಯಾಗಿ ‘ಉಪಾಧ್ಯಕ್ಷ’ ಖ್ಯಾತಿಯ ಮಲೈಕಾ ಟಿ ವಸುಪಾಲ್, ನಾಗಭೂಷಣ್‍ಗೆ ಜೋಡಿಯಾಗಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈಗಾಗಲೇ ‘ವಿದ್ಯಾಪತಿ ಚಿತ್ರದ ‘ಅಯ್ಯೋ ವಿಧಿಯೇ …’ ಹಾಡು ಬಿಡುಗಡೆಯಾಗಿದ್ದು, ಸಾಕಷ್ಟು ಜನಪ್ರಿಯವಾಗಿದೆ. ಸದ್ಯದಲ್ಲೇ ಚಿತ್ರದ ಹಾಡುಗಳು ಮತ್ತು ಟೀಸರ್‍ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…

43 seconds ago

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

6 mins ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

9 mins ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

14 mins ago

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

9 hours ago