ಮನರಂಜನೆ

‘ಟಾಕ್ಸಿಕ್’ ಬರಬೇಕಿದ್ದ ದಿನದಂದು ‘ವಿದ್ಯಾಪತಿ’ ಆಗಮನಕ್ಕೆ ಮುಹೂರ್ತ ಸಿಕ್ಕಾಯ್ತು

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ.

‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ ದಿನ ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಬಿಡುಗಡೆಯಾಬೇಕಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿಯದಿರುವುದರಿಂದ ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ. ಹೀಗಿರುವಾಗಲೇ, ಅದೇ ದಿನದಂದು ‘ವಿದ್ಯಾಪತಿ’ ಚಿತ್ರದ ಬಿಡುಗಡೆ ಘೋಷಣೆಯಾಗಿದೆ. ದೊಡ್ಡ ಚಿತ್ರವೊಂದು ಬಿಡುಗಡೆಯಾಗುತ್ತಿರುವ ಭಯದಲ್ಲಿ, ಆ ದಿನ ಚಿತ್ರ ಬಿಡುಗಡೆ ಮಾಡುವುದಕ್ಕೆ ಯಾರೂ ಮುಂದೆ ಬಂದಿರಲಿಲ್ಲ. ಯಾವಾಗ ‘ಟಾಕ್ಸಿಕ್‍’ ಬರುವುದು ಅನುಮಾನವಾಗಿದೆಯೋ, ಆ ಅವಕಾಶವನ್ನು ‘ವಿದ್ಯಾಪತಿ’ ತಂಡದವರು ಬಳಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಡಾಲಿ ಪಿಕ್ಚರ್ಸ್ ಸಂಸ್ಥೆಯಡಿ ‘ಟಗರು ಪಲ್ಯ’ ಚಿತ್ರದ ನಂತರ ಧನಂಜಯ್‍, ನಾಗಭೂಷಣ್‍ ಅಭಿನಯದಲ್ಲಿ ‘ವಿದ್ಯಾಪತಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‘ವಿದ್ಯಾಪತಿ’, ಡಾಲಿ ಪಿಕ್ಚರ್ಸ್‍ನ ನಾಲ್ಕನೇ ಚಿತ್ರ. ಕೆಲವು ವರ್ಷಗಳ ಹಿಂದೆ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾದ ‘ಇಕ್ಕಟ್’ ಚಿತ್ರವನ್ನು ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂ ಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ನಿಭಾಯಿಸಿದ್ದಾರೆ.

‘ವಿದ್ಯಾಪತಿ’ ಒಂದು ಕಾಮಿಡಿ ಚಿತ್ರವಾಗಿದ್ದು, ಇದರಲ್ಲಿ ನಾಗಭೂಷಣ್, ಕರಾಟೆ ಪಟುವಾಗಿ ನಟಿಸುತ್ತಿದ್ದಾರೆ. ಇನ್ನು, ಕರಾಟೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ನಾಯಕಿಯಾಗಿ ‘ಉಪಾಧ್ಯಕ್ಷ’ ಖ್ಯಾತಿಯ ಮಲೈಕಾ ಟಿ ವಸುಪಾಲ್, ನಾಗಭೂಷಣ್‍ಗೆ ಜೋಡಿಯಾಗಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈಗಾಗಲೇ ‘ವಿದ್ಯಾಪತಿ ಚಿತ್ರದ ‘ಅಯ್ಯೋ ವಿಧಿಯೇ …’ ಹಾಡು ಬಿಡುಗಡೆಯಾಗಿದ್ದು, ಸಾಕಷ್ಟು ಜನಪ್ರಿಯವಾಗಿದೆ. ಸದ್ಯದಲ್ಲೇ ಚಿತ್ರದ ಹಾಡುಗಳು ಮತ್ತು ಟೀಸರ್‍ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

57 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

2 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

5 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

5 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

6 hours ago