ನಾಗಭೂಷಣ್ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ.
‘ವಿದ್ಯಾಪತಿ’ ಚಿತ್ರವು ಏಪ್ರಿಲ್ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ ದಿನ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರವು ಬಿಡುಗಡೆಯಾಬೇಕಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿಯದಿರುವುದರಿಂದ ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ. ಹೀಗಿರುವಾಗಲೇ, ಅದೇ ದಿನದಂದು ‘ವಿದ್ಯಾಪತಿ’ ಚಿತ್ರದ ಬಿಡುಗಡೆ ಘೋಷಣೆಯಾಗಿದೆ. ದೊಡ್ಡ ಚಿತ್ರವೊಂದು ಬಿಡುಗಡೆಯಾಗುತ್ತಿರುವ ಭಯದಲ್ಲಿ, ಆ ದಿನ ಚಿತ್ರ ಬಿಡುಗಡೆ ಮಾಡುವುದಕ್ಕೆ ಯಾರೂ ಮುಂದೆ ಬಂದಿರಲಿಲ್ಲ. ಯಾವಾಗ ‘ಟಾಕ್ಸಿಕ್’ ಬರುವುದು ಅನುಮಾನವಾಗಿದೆಯೋ, ಆ ಅವಕಾಶವನ್ನು ‘ವಿದ್ಯಾಪತಿ’ ತಂಡದವರು ಬಳಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.
ಡಾಲಿ ಪಿಕ್ಚರ್ಸ್ ಸಂಸ್ಥೆಯಡಿ ‘ಟಗರು ಪಲ್ಯ’ ಚಿತ್ರದ ನಂತರ ಧನಂಜಯ್, ನಾಗಭೂಷಣ್ ಅಭಿನಯದಲ್ಲಿ ‘ವಿದ್ಯಾಪತಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‘ವಿದ್ಯಾಪತಿ’, ಡಾಲಿ ಪಿಕ್ಚರ್ಸ್ನ ನಾಲ್ಕನೇ ಚಿತ್ರ. ಕೆಲವು ವರ್ಷಗಳ ಹಿಂದೆ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಯಾದ ‘ಇಕ್ಕಟ್’ ಚಿತ್ರವನ್ನು ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂ ಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ನಿಭಾಯಿಸಿದ್ದಾರೆ.
‘ವಿದ್ಯಾಪತಿ’ ಒಂದು ಕಾಮಿಡಿ ಚಿತ್ರವಾಗಿದ್ದು, ಇದರಲ್ಲಿ ನಾಗಭೂಷಣ್, ಕರಾಟೆ ಪಟುವಾಗಿ ನಟಿಸುತ್ತಿದ್ದಾರೆ. ಇನ್ನು, ಕರಾಟೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ನಾಯಕಿಯಾಗಿ ‘ಉಪಾಧ್ಯಕ್ಷ’ ಖ್ಯಾತಿಯ ಮಲೈಕಾ ಟಿ ವಸುಪಾಲ್, ನಾಗಭೂಷಣ್ಗೆ ಜೋಡಿಯಾಗಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಈಗಾಗಲೇ ‘ವಿದ್ಯಾಪತಿ ಚಿತ್ರದ ‘ಅಯ್ಯೋ ವಿಧಿಯೇ …’ ಹಾಡು ಬಿಡುಗಡೆಯಾಗಿದ್ದು, ಸಾಕಷ್ಟು ಜನಪ್ರಿಯವಾಗಿದೆ. ಸದ್ಯದಲ್ಲೇ ಚಿತ್ರದ ಹಾಡುಗಳು ಮತ್ತು ಟೀಸರ್ ಬಿಡುಗಡೆಯಾಗಲಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…