ಮನರಂಜನೆ

‘ಓಡೋ ಓಡೋ ಓಡೋ …’ ಹಾಡಿಗೆ ಒಂದು ಮಿಲಿಯನ್ ವೀಕ್ಷಣೆ

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಂತಾದವರು ಜೊತೆಯಾಗಿ ನಟಿಸಿರುವ ‘ಫಾರೆಸ್ಟ್’ ಎಂಬ ಚಿತ್ರದ ಹಾಡು, ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಕೈಲಾಶ್‍ ಖೇರ್‍ ಹಾಡಿರುವ ಈ ಹಾಡು ಇದೀಗ ಒಂದು ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಕಂಡಿದೆ.

‘ಫಾರೆಸ್ಟ್’ ಚಿತ್ರದ ‘ಓಡೋ ಓಡೋ ಓಡೋ …’ ಚಿತ್ರದ ಹಾಡಿಗೆ ಪುನೀತ್‍ ಆರ್ಯ ಸಾಹಿತ್ಯ ಬರೆದಿದ್ದು, ಕೈಲಾಶ್‍ ಖೇರ್‍ ಮತ್ತು ಹರ್ಷ ಉಪ್ಪಾರ್‍ ಧ್ವನಿಯಾಗಿದ್ದಾರೆ. ಇನ್ನು, ಯೂಟ್ಯೂಬ್‍ನ ಎನ್‍.ಎಂ.ಕೆ. ಸಿನಿಮಾಸ್‍ ಚಾನಲ್‍ನಲ್ಲಿ ಈ ಹಾಡು ಬಿಡುಗಡೆ ಆಗಿದೆ. ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.

ಎನ್‍.ಎಂ.ಕೆ. ಸಿನಿಮಾಸ್‍ ಬ್ಯಾನರ್‍ನಡಿ ಎನ್‍.ಎಂ. ಕಾಂತರಾಜ್ ನಿರ್ಮಿಸಿರುವ ‘ಫಾರೆಸ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಕಾಡು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಹೆಸರೇ ಹೇಳುವಂತೆ ಕಾಡಿನಲ್ಲಿ ನಡೆಯುವ ಸಾಹಸಮಯ ಕಥೆ ಇದಾಗಿದ್ದು, ಒಂದಿಷ್ಟು ಜನ ಕಾಡಿಗೆ ಯಾಕೆ ಹೋಗುತ್ತಾರೆ, ಹೋಗಿ ಏನು ಮಾಡುತ್ತಾರೆ ಎಂಬುದನ್ನು ಹೇಳುವ ಪ್ರಯತ್ನ ಮಾಡಲಾಗಿದೆ.

‘ಫಾರೆಸ್ಟ್’ ಚಿತ್ರಕ್ಕೆ ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೆ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಣಾಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ನಟಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago