ಮನರಂಜನೆ

‘ಓಡೋ ಓಡೋ ಓಡೋ …’ ಹಾಡಿಗೆ ಒಂದು ಮಿಲಿಯನ್ ವೀಕ್ಷಣೆ

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಂತಾದವರು ಜೊತೆಯಾಗಿ ನಟಿಸಿರುವ ‘ಫಾರೆಸ್ಟ್’ ಎಂಬ ಚಿತ್ರದ ಹಾಡು, ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಕೈಲಾಶ್‍ ಖೇರ್‍ ಹಾಡಿರುವ ಈ ಹಾಡು ಇದೀಗ ಒಂದು ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಕಂಡಿದೆ.

‘ಫಾರೆಸ್ಟ್’ ಚಿತ್ರದ ‘ಓಡೋ ಓಡೋ ಓಡೋ …’ ಚಿತ್ರದ ಹಾಡಿಗೆ ಪುನೀತ್‍ ಆರ್ಯ ಸಾಹಿತ್ಯ ಬರೆದಿದ್ದು, ಕೈಲಾಶ್‍ ಖೇರ್‍ ಮತ್ತು ಹರ್ಷ ಉಪ್ಪಾರ್‍ ಧ್ವನಿಯಾಗಿದ್ದಾರೆ. ಇನ್ನು, ಯೂಟ್ಯೂಬ್‍ನ ಎನ್‍.ಎಂ.ಕೆ. ಸಿನಿಮಾಸ್‍ ಚಾನಲ್‍ನಲ್ಲಿ ಈ ಹಾಡು ಬಿಡುಗಡೆ ಆಗಿದೆ. ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.

ಎನ್‍.ಎಂ.ಕೆ. ಸಿನಿಮಾಸ್‍ ಬ್ಯಾನರ್‍ನಡಿ ಎನ್‍.ಎಂ. ಕಾಂತರಾಜ್ ನಿರ್ಮಿಸಿರುವ ‘ಫಾರೆಸ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಕಾಡು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಹೆಸರೇ ಹೇಳುವಂತೆ ಕಾಡಿನಲ್ಲಿ ನಡೆಯುವ ಸಾಹಸಮಯ ಕಥೆ ಇದಾಗಿದ್ದು, ಒಂದಿಷ್ಟು ಜನ ಕಾಡಿಗೆ ಯಾಕೆ ಹೋಗುತ್ತಾರೆ, ಹೋಗಿ ಏನು ಮಾಡುತ್ತಾರೆ ಎಂಬುದನ್ನು ಹೇಳುವ ಪ್ರಯತ್ನ ಮಾಡಲಾಗಿದೆ.

‘ಫಾರೆಸ್ಟ್’ ಚಿತ್ರಕ್ಕೆ ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೆ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಣಾಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ನಟಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

2 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

4 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

10 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

10 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

11 hours ago