Categories: ಮನರಂಜನೆ

ಪುರಂದರದಾಸರ ಕುರಿತು ಕನ್ನಡದಲ್ಲಿ ಇನ್ನೊಂದು ಚಿತ್ರ; ಟ್ರೇಲರ್ ಬಿಡುಗಡೆ

ದಾಸಶ್ರೇಷ್ಠ ಪುರಂದರದಾಸರ ಕುರಿತು ಕನ್ನಡದಲ್ಲಿ ಎರಡು ಚಿತ್ರಗಳು ಬಂದಿವೆ. ಅವೆರಡೂ ಬಂದಿದ್ದು 60ರ ದಶಕದಲ್ಲಿ. ಈಗ ಸುಮಾರು 57 ವರ್ಷಗಳ ನಂತರ ಕನ್ನಡದಲ್ಲಿ ಪುರಂದರ ದಾಸರ ಕುರಿತು ಚಿತ್ರವೊಂದು ಬರುತ್ತಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗಿರಿ ಫಿಲ್ಮ್ಸ್ ‘ಹರಿದಾಸರ ದಿನಚರಿ’ ಚಿತ್ರವನ್ನು ನಿರ್ಮಿಸಿದೆ.

ಈ ಚಿತ್ರವು 15ನೇ ಶತಮಾನದ ದಾಸ ಶ್ರೇಷ್ಠ ಶ್ರೀ ಪುರಂದರದಾಸರ ದೈನಂದಿನ ಜೀವನದ ದೃಶ್ಯಗಳನ್ನು ಒಳಗೊಂಡಿದೆ. ದಾಸರು ತಮ್ಮ ದಿನಚರಿಯಲ್ಲಿ ‘ಜಗದೋದ್ಧಾರನ ಆಡಿಸಿದಳೆ ಯಶೋದೆ …’ ಸೇರಿದಂತೆ ಹಲವು ರಚನೆಗಳನ್ನು ಹೇಗೆ ಮಾಡಿದರು ಮತ್ತು ಅದರ ಹಿನ್ನೆಲೆ ಏನರಿಬಹುದು ಎಂದು ಈ ಚಿತ್ರದಲ್ಲಿಲ ಕಟ್ಟಿಕೊಡಲಾಗಿದೆ. ಈ ಚಿತ್ರದಲ್ಲಿ ದಾಸರ ಈ ವಿಶೇಷ ದಿನವನ್ನು ಮುಂಜಾನೆಯ ಪ್ರಾರ್ಥನಾ ಕರ್ಮಗಳಿಂದ ಪ್ರಾರಂಭಿಸಿ, ರಾತ್ರಿ ಮಲಗುವ ತನಕ ಚಿತ್ರಣ ನೀಡಲಾಗುತ್ತದೆ.

‘ಹರಿದಾಸರ ದಿನಚರಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಉಡುಪಿಯ ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಸಹ ಹಾಜರಿದ್ದರು.

‘ಹರಿದಾಸರ ದಿನಚರಿ’ ಚಿತ್ರವು ಸಂತ-ಕವಿ ಪುರಂದರದಾಸರ ಜೀವನದ ಒಂದು ದಿನದ ಸಾರವನ್ನು ಸೆರೆಹಿಡಿಯುವ ಒಂದು ಪ್ರಯತ್ನವಾಗಿದ್ದು, ಕಲೆ ಮತ್ತು ಆಧ್ಯಾತ್ಮಿಕತೆಯನ್ನು ಮೆಚ್ಚುವ ಪ್ರೇಕ್ಷಕರೊಂದಿಗೆ ಇದು ಆಳವಾಗಿ ಪ್ರತಿಧ್ವನಿಸುತ್ತದೆ ಎನ್ನುತ್ತಾರೆ ನಿರ್ದೇಶಕ ಗಿರೀಶ್‍.

ಕನ್ನಡದ ಖ್ಯಾತ ದಾಸ ಸಾಹಿತ್ಯದ ಗಾಯಕ ಡಾ. ವಿದ್ಯಾಭೂಷಣರು, ಈ ಚಿತ್ರದಲ್ಲಿ ಶ್ರೀ ಪುರಂದರದಾಸರಾಗಿ ಕಾಣಿಸಿಕೊಂಡಿದ್ದಾರೆ. ಇತರೆ ಪಾತ್ರಗಳಲ್ಲಿ ಘನಶ್ಯಾಮ್ ಕೆ.ವಿ, ಗೋಕುಲ್ ಅಯ್ಯರ್, ವಾಸುದೇವ ಮೂರ್ತಿ ಕೆ.ಎನ್, ಚಲಪತಿ, ಪ್ರಸನ್ನ ವೆಂಕಟೇಶ ಮೂರ್ತಿ, ಪದ್ಮಕಲಾ ಡಾ. ಜಿ. ಎಲ್ ಹೆಗ್ಡೆ ಮುಂತಾದವರಿದ್ದಾರೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ನಿರ್ಮಾಣ ಮತ್ತು ನಿರ್ದೇಶನ ಹೊಣೆ ಹೊತ್ತವರು ಗಿರೀಶ್ ನಾಗರಾಜ. ಡಾ. ವಿದ್ಯಾಭೂಷಣರು ಸಂಗೀತ ಸಂಯೋಜಿಸುವುದರ ಜೊತೆಗೆ ಎಲ್ಲಾ ಹಾಡುಗಳನ್ನು ಹಾಡಿದ್ದಾರೆ. ಚಿತ್ರಕ್ಕೆ ರೊಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಸುಹಾಸ್‍ ಜಯ್‍ ಅವರ ಸಂಕಲನವಿದೆ.

ಭೂಮಿಕಾ

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

1 hour ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

3 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

4 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

4 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

4 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

5 hours ago