ದಾಸಶ್ರೇಷ್ಠ ಪುರಂದರದಾಸರ ಕುರಿತು ಕನ್ನಡದಲ್ಲಿ ಎರಡು ಚಿತ್ರಗಳು ಬಂದಿವೆ. ಅವೆರಡೂ ಬಂದಿದ್ದು 60ರ ದಶಕದಲ್ಲಿ. ಈಗ ಸುಮಾರು 57 ವರ್ಷಗಳ ನಂತರ ಕನ್ನಡದಲ್ಲಿ ಪುರಂದರ ದಾಸರ ಕುರಿತು ಚಿತ್ರವೊಂದು ಬರುತ್ತಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗಿರಿ ಫಿಲ್ಮ್ಸ್ ‘ಹರಿದಾಸರ ದಿನಚರಿ’ ಚಿತ್ರವನ್ನು ನಿರ್ಮಿಸಿದೆ.
ಈ ಚಿತ್ರವು 15ನೇ ಶತಮಾನದ ದಾಸ ಶ್ರೇಷ್ಠ ಶ್ರೀ ಪುರಂದರದಾಸರ ದೈನಂದಿನ ಜೀವನದ ದೃಶ್ಯಗಳನ್ನು ಒಳಗೊಂಡಿದೆ. ದಾಸರು ತಮ್ಮ ದಿನಚರಿಯಲ್ಲಿ ‘ಜಗದೋದ್ಧಾರನ ಆಡಿಸಿದಳೆ ಯಶೋದೆ …’ ಸೇರಿದಂತೆ ಹಲವು ರಚನೆಗಳನ್ನು ಹೇಗೆ ಮಾಡಿದರು ಮತ್ತು ಅದರ ಹಿನ್ನೆಲೆ ಏನರಿಬಹುದು ಎಂದು ಈ ಚಿತ್ರದಲ್ಲಿಲ ಕಟ್ಟಿಕೊಡಲಾಗಿದೆ. ಈ ಚಿತ್ರದಲ್ಲಿ ದಾಸರ ಈ ವಿಶೇಷ ದಿನವನ್ನು ಮುಂಜಾನೆಯ ಪ್ರಾರ್ಥನಾ ಕರ್ಮಗಳಿಂದ ಪ್ರಾರಂಭಿಸಿ, ರಾತ್ರಿ ಮಲಗುವ ತನಕ ಚಿತ್ರಣ ನೀಡಲಾಗುತ್ತದೆ.
‘ಹರಿದಾಸರ ದಿನಚರಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಉಡುಪಿಯ ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಸಹ ಹಾಜರಿದ್ದರು.
‘ಹರಿದಾಸರ ದಿನಚರಿ’ ಚಿತ್ರವು ಸಂತ-ಕವಿ ಪುರಂದರದಾಸರ ಜೀವನದ ಒಂದು ದಿನದ ಸಾರವನ್ನು ಸೆರೆಹಿಡಿಯುವ ಒಂದು ಪ್ರಯತ್ನವಾಗಿದ್ದು, ಕಲೆ ಮತ್ತು ಆಧ್ಯಾತ್ಮಿಕತೆಯನ್ನು ಮೆಚ್ಚುವ ಪ್ರೇಕ್ಷಕರೊಂದಿಗೆ ಇದು ಆಳವಾಗಿ ಪ್ರತಿಧ್ವನಿಸುತ್ತದೆ ಎನ್ನುತ್ತಾರೆ ನಿರ್ದೇಶಕ ಗಿರೀಶ್.
ಕನ್ನಡದ ಖ್ಯಾತ ದಾಸ ಸಾಹಿತ್ಯದ ಗಾಯಕ ಡಾ. ವಿದ್ಯಾಭೂಷಣರು, ಈ ಚಿತ್ರದಲ್ಲಿ ಶ್ರೀ ಪುರಂದರದಾಸರಾಗಿ ಕಾಣಿಸಿಕೊಂಡಿದ್ದಾರೆ. ಇತರೆ ಪಾತ್ರಗಳಲ್ಲಿ ಘನಶ್ಯಾಮ್ ಕೆ.ವಿ, ಗೋಕುಲ್ ಅಯ್ಯರ್, ವಾಸುದೇವ ಮೂರ್ತಿ ಕೆ.ಎನ್, ಚಲಪತಿ, ಪ್ರಸನ್ನ ವೆಂಕಟೇಶ ಮೂರ್ತಿ, ಪದ್ಮಕಲಾ ಡಾ. ಜಿ. ಎಲ್ ಹೆಗ್ಡೆ ಮುಂತಾದವರಿದ್ದಾರೆ.
ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ನಿರ್ಮಾಣ ಮತ್ತು ನಿರ್ದೇಶನ ಹೊಣೆ ಹೊತ್ತವರು ಗಿರೀಶ್ ನಾಗರಾಜ. ಡಾ. ವಿದ್ಯಾಭೂಷಣರು ಸಂಗೀತ ಸಂಯೋಜಿಸುವುದರ ಜೊತೆಗೆ ಎಲ್ಲಾ ಹಾಡುಗಳನ್ನು ಹಾಡಿದ್ದಾರೆ. ಚಿತ್ರಕ್ಕೆ ರೊಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಸುಹಾಸ್ ಜಯ್ ಅವರ ಸಂಕಲನವಿದೆ.
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…