ಮನರಂಜನೆ

ಇನ್ನೊಂದು ‘ನಾ ನಿನ್ನ ಬಿಡಲಾರೆ’; ಇದು ಹಾರರ್ ಸ್ಪರ್ಶದ ಥ್ರಿಲ್ಲರ್ ಚಿತ್ರ

ಕನ್ನಡದಲ್ಲಿ ಅತೀ ಹೆಚ್ಚು ಬಳಕೆಯಾದ ಶೀರ್ಷಿಕೆಯೆಂದರೆ ಅದು ‘ನಾಗರಹಾವು’. ಇದುವರೆಗೂ ಕನ್ನಡದಲ್ಲಿ ಮೂರು ಥ್ರಿಲ್ಲರ್‍ ಚಿತ್ರಗಳು ಬಿಡುಗಡೆ ಆಗಿವೆ. ಈಗ ಆ ದಾಖಲೆಯನ್ನು ‘ನಾ ನಿನ್ನ ಬಿಡಲಾರೆ’ ಮುರಿದಿದೆ.

1979ರಲ್ಲಿ ಅನಂತ್‍ ನಾಗ್‍ ಮತ್ತು ಲಕ್ಷ್ಮೀ ಅಭಿನಯದ ‘ನಾ ನಿನ್ನ ಬಿಡಲಾರೆ’ ಬಿಡುಗಡೆಯಾಗಿತ್ತು. ಆ ನಂತರ ಕೆಲವು ವರ್ಷಗಳ ಹಿಂದೆ ಅದೇ ಹೆಸರಿನ ಇನ್ನೊಂದು ಚಿತ್ರ ಬಂದಿತ್ತು. ಕೆಲವೇ ತಿಂಗಳುಗಳ ಹಿಂದೆ ‘ನಾ ನಿನ್ನ ಬಿಡಲಾರೆ’’ ಎಂಬ ಚಿತ್ರದ ಮುಹೂರ್ತ ಮಾಡಿದ್ದರು. ಈ ಚಿತ್ರಕ್ಕೆ ‘ಘೋಸ್ಟ್ – 2.0’ ಎಂಬ ಅಡಿಬರಹವೂ ಇತ್ತು. ಆ ಚಿತ್ರದ ಚಿತ್ರೀಕರಣ ಶುರುವಾಗುವ ಮೊದಲೇ ಅದೇ ಹೆಸರಿನ ಇನ್ನೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ.

ಈ ಹೊಸ ‘ನಾ ನಿನ್ನ ಬಿಡಲಾರೆ’ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆ ಆಗಿದೆ. ಇತ್ತೀಚೆಗೆ ಶರಣ್‍ ಚಿತ್ರದ ಟೀಸರ್‍ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಕಲ್ಬುರ್ಗಿ ಮೂಲದ ಅಂಬಾಲಿ ಭಾರತಿ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರೆ, ಅವರ ತಾಯಿ ಶ್ರೀಮತಿ ಭಾರತಿ ಬಾಳಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ನವೀನ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಹೇಮಂತ್‍ ಹೆಗಡೆ ಅದೇ ಹೆಸರಿನ ಚಿತ್ರ ಮಾಡುತ್ತಿರುವಾಗ ಭಾರತಿಗೆ ಅದೇ ಹೆಸರು ಸಿಕ್ಕಿದ್ದು ಹೇಗೆ ಎಂಬ ಪ್ರಶ್ನೆ ಬರುವುದು ಸಹಜ. ಈ ಕುರಿತು ಉತ್ತರಿಸುವ ಅವರು, ‘ನಾವು 2022ರಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ದಾಖಲಿಸಿದ್ದೆವು. ಎರಡು ತಿಂಗಳ ಹಿಂದೆ ಹೇಮಂತ್‍ ಅವರು ಇದೇ ಹೆಸರಿನ ಚಿತ್ರ ಮಾಡುತ್ತಿರುವ ವಿಷಯ ಗೊತ್ತಾಯಿತು. ಯಾರು ಮೊದಲು ಸೆನ್ಸಾರ್‍ ಮಾಡಿಸುತ್ತಾರೋ ಅವರು ಆ ಶೀರ್ಷಿಕೆ ಇಟ್ಟುಕೊಳ್ಳಬಹುದು ಎಂದು ಅವರೇ ಆ ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಹೇಳಿದ್ದರು. ನಮ್ಮ ಚಿತ್ರ ಈಗಾಗಲೇ ಸೆನ್ಸಾರ್‍ ಆಗಿದೆ. ಸದ್ಯದಲ್ಲೇ ಬಿಡುಗಡೆ ಆಗಲಿದೆ’ ಎಂದರು.

‘ನಾ ನಿನ್ನ ಬಿಡಲಾರೆ’ ಕುರಿತು ಮಾತನಾಡುವ ಭಾರತಿ ಅಂಬಾಲಿ, ‘ನಮ್ಮ ನಿರ್ದೇಶಕ ನವೀನ್ ಹಾಗೂ ನಾನು ಐದು ವರ್ಷದ ಗೆಳೆಯರು. ಅವರು ಈ ಕಥೆ ಹೇಳಿದರು. ನಾನು ಈ ತಂಡದ ಜೊತೆ ಸೇರಿ ನಿರ್ಮಾಪಕರನ್ನು ಹುಡುಕಿದೆವು. ಆದರೆ, ಸೆಟ್ ಆಗಲಿಲ್ಲ. ನಂತರ ಅಮ್ಮನಿಗೆ ನಿರ್ದೇಶಕರಿಂದ ಕಥೆ ಹೇಳಿಸಿದೆ. ಅಮ್ಮ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ಅಮ್ಮ, ಚಿಕ್ಕಮ್ಮ ಮತ್ತು ಅಜ್ಜಿ ಅವರ ಹೆಸರುಗಳನ್ನು ಇಟ್ಟುಕೊಂಡು ಕೆ.ಯು.ಬಿ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿರ್ಮಾಣ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ನಾ ನಿನ್ನ ಬಿಡಲಾರೆ’ ಹಾರರ್ ಚಿತ್ರವಾದರೆ, ಇದು ಹಾರರ್ ಅಂಶಗಳುಳ್ಳ ಥ್ರಿಲ್ಲರ್‍ ಚಿತ್ರ ಎಂದರು ನಿರ್ದೇಶಕ ನವೀನ್‍. ‘ನಮ್ಮ ಕಥೆಗೆ ಶೀರ್ಷಿಕೆ ಸೂಕ್ತ ಆಗಿದ್ದರಿಂದ ಈ ಹೆಸರು ಇಡಲಾಗಿದೆ. ಇದೊಂದು ಸಂಪೂರ್ಣ ಹಾರರ್‍ ಚಿತ್ರವಲ್ಲ. ಹಾರರ್‍ ಅಂಶಗಳಿವೆ. ಮಿಕ್ಕಂತೆ ಚಿತ್ರದಲ್ಲಿ ಬೇರೇನೇ ಇದೆ. ಮಾಮೂಲಿ ವಿಷಯಗಳನ್ನು ಬಿಟ್ಟು ಇನ್ನೇನೋ ಹೇಳುವ ಪ್ರಯತ್ನ ಮಾಡಿದ್ದೇವೆ. ಕತ್ಲೆಕಾಡು ಎಂಬ ಊರಿನಲ್ಲಿ ನಡೆಯುವ ಕಥೆ ಇದು. ಇದೊಂದು ಸಸ್ಪೆನ್ಸ್ ಚಿತ್ರ’ ಎಂದರು.

ಈ ಹಿಂದೆ ‘ರಂಗ್‍ಭಿರಂಗಿ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಪಂಚಾಕ್ಷರಿ ಅಲಿಯಾಸ್‍ ಪಂಚಿ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, ಈ ಚಿತ್ರದಲ್ಲಿ ಮಹಾಂತೇಶ್‍, ಸೀರುಂಡೆ ರಘು ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

6 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

6 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

6 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

6 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

6 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

7 hours ago