ಮನರಂಜನೆ

ನಾಯಕಿ ಪ್ರಧಾನ ಚಿತ್ರದಲ್ಲೊಂದು ‘ಬಗ್ಸೋದೇ ಬಡಿಯೋದೇ’ ಹಾಡು

ಕನ್ನಡದಲ್ಲಿ ನಾಯಕಿ ಪ್ರಧಾನ ಚಿತ್ರಗಳು ಕಡಿಮೆಯಾಗುತ್ತಿವೆ. ಹೀಗಿರುವಾಗಲೇ, ಸದ್ದಿಲ್ಲದೆ ‘ಲೈಫ್‍ ಆಫ್‍ ಮೃದುಲ’ ಎಂಬ ಚಿತ್ರವೊಂದು ಕನ್ನಡದಲ್ಲಿ ತಯಾರಾಗಿ ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ಮತ್ತು ‘ಬಗ್ಸೋದೇ ಬಡಿಯೋದೇ’ ಎಂಬ ಹಾಡು ಬಿಡುಗಡೆಯಾಗಿದೆ.

ಕಾಂಗ್ರೆಸ್‍ ಯುವ ಮುಖಂಡ ಮೊಹ್ಮದ್ ನಲಪಾಡ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಾಗೆಯೇ, ಚಿತ್ರತಂಡಕ್ಕೆ ಕಿವಿ ಮಾತು ಸಹ ಹೇಳಿದರು. ‘ಬಗ್ಸೋದು ಬಡಿಯೋದು ಎಲ್ಲ ಬೇಕಾಗಿಲ್ಲ. ಅದು ತಪ್ಪು ಸಂದೇಶ ಸಾರುತ್ತದೆ. ಬಗ್ಸಿ, ಹೊಡೆಸಿ ಅನುಭವವಾದ ಮೇಲೆ ಈ ಮಾತು ಹೇಳುತ್ತಿದ್ದೀನಿ. ಹಾಗಾಗಿ, ಬಗ್ಸೋದು ಮತ್ತು ಹೊಡೆಯೋದು ಬದಲಾಗಬೇಕು. ಪ್ರಮುಖವಾಗಿ ನಮ್ಮ ಶೈಲಿ ಬದಲಾಗಬೇಕು. Rap ಸಾಂಗ್‍ ಅಂದರೆ ಬಗ್ಸೋದು, ಬಡಿಯೋದು ಇರಬೇಕು ಅಂತೇನಿಲ್ಲ. ಒಳ್ಳೆಯತನದಲ್ಲೂ Rap ಮಾಡಬಹುದು. ಈ ಪದಗಳು ಬದಲಾದರೆ ಮುಂದಿನ ತಲೆಮಾರು ಬದಲಾಗೋಕೆ ಸಾಧ್ಯ. ಈ ಬಗ್ಸೋದು ಬಡಿಯೋದು ಅನ್ನೋದೆಲ್ಲಾ ಯುವಕರಿಗ ತಪ್ಪಾಗಿ ಅರ್ಥವಾಗುತ್ತೆ. ಇದನ್ನು ತೋರಿಸಬೇಡಿ. ಮುಂದಿನ ದಿನಗಳಲ್ಲ ಏನೇ ಮಾಡುವಾಗಲೂ ಗಮನದಲ್ಲಿರಲಿ’ ಎಂದು ಕಿವಿಮಾತು ಹೇಳಿದರು.

‘ಲೈಫ್‍ ಆಫ್‍ ಮೃದುಲಾ’ ಎಂಬ ಹೆಸರೇ ಹೇಳುವಂತೆ, ಮೃದುಲಾ ಎಂಬುವಳ ಜೀವನದಲ್ಲಿ ಎದುರಾಗುವ ಮೂರು ವಿಭಿನ್ನ ಕಾಲ ಘಟ್ಟಗಳ ಸುತ್ತ ಕಥೆ ಸಾಗುತ್ತದೆ. ಆಕೆಯ ಬದುಕಲ್ಲಿ ಅನಿರೀಕ್ಷಿತವಾಗಿ ಬರುವ ಸವಾಲನ್ನು ಯಾವ ರೀತಿ ಎದುರಿಸುತ್ತಾಳೆ ಎಂಬುದನ್ನು ಕುತೂಹಲ ತಿರುವುಗಳ ಮೂಲಕ ಥ್ರಿಲ್ಲರ್ ರೂಪದಲ್ಲಿ ತೋರಿಸಲಾಗಿದೆ.

ಈ ಚಿತ್ರದಲ್ಲಿ ಮೃದುಲಾ ಆಗಿ ಪೂಜಾ ಲೋಕಾಪುರ ನಟಿಸಿದ್ದಾರೆ. ಚಿತ್ರದ ಕುರಿತು ಮಾತನಾಡುವ ಅವರು, ‘ನಾನು ಸೀರಿಯಲ್‍ ನಟಿ. ಇದೇ ಮೊದಲ ಚಿತ್ರ. ನಾನು ನಾಯಕಿ ಪ್ರಧಾನ ಚಿತ್ರವನ್ನು ಹುಡುಕುತ್ತಿದ್ದೆ. ಆದರೆ, ಸಿಕ್ಕಿರಲಿಲ್ಲ. ನಿರ್ದೇಶಕರು ಫೋನ್ ಮಾಡಿದಾಗ ನಾನು ಒಪ್ಪಿದೆ. ಕಥೆ ಕೇಳಿದಾಗ ಇಷ್ಟವಾಯ್ತು. ಹೆಣ್ಣ ನಾಲ್ಕು ಗೋಡೆಗಳ ಮಧ್ಯೆ ಏನೆಲ್ಲಾ ಸಮಸ್ಯೆ ಎದುರಿಸುತ್ತಾಳೆ, ಅದರಿಂದ ಹೇಗೆ ಆಚೆ ಬರುತ್ತಾಳೆ, ಸಮಾಜದಲ್ಲಿ ಹೇಗೆ ಬದುಕುತ್ತಾಳೆ ಎಂಬುದೇ ಚಿತ್ರದ ಕಥೆ. ಹೆಣ್ಣಿನ ಜೀವನದಲ್ಲಿ ಏನಾಗುತ್ತದೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಆಕೆಯ ಜೀವನವನ್ನು ಅರ್ಥ ಮಾಡಿಕೊಳ್ಳೋರು ಇರೋದಿಲ್ಲ. ಹೆಣ್ಣ ನಾಲ್ಕು ಗೋಡೆ ಮಧ್ಯೆ ಸೀಮಿತವಲ್ಲ, ಅದರಾಚೆ ಬಂದು ನಾನು ಬದುಕುತ್ತೇನೆ, ಯಾರ ಮೇಲೂ ಅವಲಂಬಿತಳಾಗಿರುವುದಿಲ್ಲ, ಸ್ವಂತವಾಗಿ ಏನಾದರೂ ಸಾಧಿಸುತ್ತೇನೆ ಎಂದು ಹೇಳುವ ಚಿತ್ರ. ಇದೊಂದು ಸವಾಲಿನ ಪಾತ್ರ. ಮುಗ್ಧ ಹುಡುಗಿಯ ಪಾತ್ರ ಮಾಡಿದ್ದೇನೆ’ ಎಂದರು.

ಮದನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಮದನ್‌ ಕುಮಾರ್ ನಿರ್ಮಿಸಿ, ಚೇತನ್‍ ತ್ರಿವೇಣ್‍ ನಿರ್ದೇಶಿಸಿರುವ ‘ಲೈಫ್‍ ಆಫ್‍ ಮೃದುಲ’ ಚಿತ್ರದಲ್ಲಿ ಪೂಜಾ ಜೊತೆಗೆ ಆಶಾ ಸುಜಯ್, ಶಶಾಂಕ್, ಕುಲದೀಪ್, ಯೋಗಿ ದೇವಗಂಗೆ, ಅನೂಪ್‌ ಥಾಮಸ್, ಪ್ರೀತಿ ಚಿದಾನಂದ್, ಶರೀಫ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ರಾಹುಲ್‍ ಎಸ್‍ ವಾಸ್ತರ್‍ ಸಂಗೀತ, ಅಚ್ಚು ಸುರೇಶ್‍ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago