ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. ಡೇವಿಲ್ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ನಟ ದರ್ಶನ್ ಕೈಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.
ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಅವರ ಕೈಗೆ ಸರ್ಜರಿ ಮಾಡಲಾಗಿದ್ದು. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಸ್ತ್ರ ಚಿಕಿತ್ಸೆಯ ಬಳಿಕ ದರ್ಶನ್ ತಮ್ಮ ಅಭಿಮಾನಿ ಜೊತೆಗೆ ಕ್ಲಿಕ್ಕಿಸಿಕೊಂಡ ಫೋಟೊ ವೈರಲ್ ಆಗುತ್ತಿದೆ. ಫೋಟೋ ನೋಡಿದ ಫ್ಯಾನ್ಸ್, ಈಗ ಆದಷ್ಟು ಬೇಗ ಗುಣಮುಖರಾಗಿ ಬಾಸ್ ಎಂದು ಪ್ರಾರ್ಥಿನೆ ಮಾಡುತ್ತಿದ್ದಾರೆ.
ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಒಂದು ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಈ ಸಿನಿಮಾಗೆ ದೊಡ್ಡ ಸೆಟ್ ಹಾಕಿ ಫೈಟ್ ಸನ್ನಿವೇಶ ಸೆರೆ ಹಿಡಿಯಲಾಗಿದ್ದು. ಚಿತ್ರೀಕರಣದ ವೇಳೆ ದರ್ಶನ್ ಅವರ ಕೈಗೆ ಪೆಟ್ಟಾಗಿತ್ತು ಎನ್ನಲಾಗಿದೆ. ಕೈ ನೋವಿಗೆ ಪಟ್ಟಿ ಧರಿಸಿ ಮ್ಯಾಟ್ನಿ ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ಬಂದಿದ್ದರು. ಈಗ ಶಸ್ತ್ರ ಯಶಸ್ವಿ ಚಿಕಿತ್ಸೆ ಮಾಡಲಾಗಿದ್ದು, ಇದೀಗ ನಟ ದರ್ಶನ್ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…