ಮನರಂಜನೆ

Oscar Award2025: ಆಸ್ಕರ್‌ ಅಂಗಳಕ್ಕೆ ಧುಮುಕಿದ ʼಲಾಪತಾ ಲೇಡಿಸ್‌ʼ

ಭಾರತದಿಂದ ಅಧಿಕೃತವಾಗಿ ಆಯ್ಕೆ

ನವದೆಹಲಿ: ಆಸ್ಕರ್‌ ಆವಾರ್ಡ್‌ ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕಿರಣ್‌ ರಾವ್‌ ಅವರ ಚೊಚ್ಚಲ ನಿರ್ದೇಶನದ ಬಾಲಿವುಡ್‌ ಸಿನಿಮಾ ಲಾಪತಾ ಲೇಡಿಸ್‌ ಚಿತ್ರ 2025ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.

ಈ ಚಲನಚಿತ್ರವನ್ನು ನಟ ಅಮಿರ್‌ ಖಾನ್‌ ನಿರ್ಮಾಣ ಮಾಡಿದ್ದಾರೆ. ವರ್ಷದ ಪ್ರಾರಂಭದಲ್ಲಿ ಬಿಡುಗಡೆಗೊಂಡ ನಂತರ ಎಲ್ಲರಿಂದ ಮೆಚ್ಚುಗೆ ಪಡೆದ ಈ ಸಿನಿಮಾ, ಒಟಿಟಿಯಲ್ಲಿಯೂ ಸಹ ಜನರಿಂದ ಮನ್ನಣೆ ಗಳಿಸಿತ್ತು.

ಲಾಪತಾ ಲೇಡಿಸ್‌ ಚಿತ್ರವು ಸಿನಿಮಾ ಮಹಿಳೆಯರ ಸಬಲೀಕರಣದ ಕುರಿತು ಇರುವ ಕಥೆಯಾಗಿದೆ. ಇದನ್ನು ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನ ಮಾಡಿದ್ದು, ಅಧಿಕೃತವಾಗಿ ಚೈನ್ನೈನಲ್ಲಿ ʻಭಾರತ ಫಿಲ್ಮ್‌ ಫೆಡರೇಶನ್‌ʼ ಸದಸ್ಯರು ಘೋಷಿಸಿದ್ದಾರೆ.

ಈ ಚಿತ್ರದಲ್ಲಿ ನಿಶಾಂತಿ ಗೋಯಾಲ್‌, ಪ್ರತಿಭಾ ರಾಂತಾ, ಸ್ಪರ್ಶ್‌ ಶ್ರೀವಾಸ್ತವ, ಚಾಯಾ ಕದಮ್‌ ಹಾಗೂ ರವಿ ಕಿಶನ್‌ ನಟಿಸಿದ್ದಾರೆ.

ನಿರ್ದೇಶಕ ಕಿರಣ್‌ ರಾವ್‌ ಅವರು ದೊಡ್ಡ ಕನಸಾಗಿರುವ ಈ ಚಿತ್ರವೂ ಆಸ್ಕರ್‌ ಪ್ರಶಸ್ತಿಯನ್ನು ಗೆಲ್ಲಬೇಕೆಂಬುದೇ ಅವರ ಆಶಯವಾಗಿತ್ತು. ಈ ಸಿನಿಮಾ ಮೊದಲು ಟೊರೆಂಟೋ ಇಂಟರ್‌ನ್ಯಾಷನಲ್‌ ಫೆಸ್ಟಿವಲ್‌ನಲ್ಲಿ ಪ್ರಸಾರವಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

26 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago