ಮನರಂಜನೆ

Oscar Award2025: ಆಸ್ಕರ್‌ ಅಂಗಳಕ್ಕೆ ಧುಮುಕಿದ ʼಲಾಪತಾ ಲೇಡಿಸ್‌ʼ

ಭಾರತದಿಂದ ಅಧಿಕೃತವಾಗಿ ಆಯ್ಕೆ

ನವದೆಹಲಿ: ಆಸ್ಕರ್‌ ಆವಾರ್ಡ್‌ ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕಿರಣ್‌ ರಾವ್‌ ಅವರ ಚೊಚ್ಚಲ ನಿರ್ದೇಶನದ ಬಾಲಿವುಡ್‌ ಸಿನಿಮಾ ಲಾಪತಾ ಲೇಡಿಸ್‌ ಚಿತ್ರ 2025ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.

ಈ ಚಲನಚಿತ್ರವನ್ನು ನಟ ಅಮಿರ್‌ ಖಾನ್‌ ನಿರ್ಮಾಣ ಮಾಡಿದ್ದಾರೆ. ವರ್ಷದ ಪ್ರಾರಂಭದಲ್ಲಿ ಬಿಡುಗಡೆಗೊಂಡ ನಂತರ ಎಲ್ಲರಿಂದ ಮೆಚ್ಚುಗೆ ಪಡೆದ ಈ ಸಿನಿಮಾ, ಒಟಿಟಿಯಲ್ಲಿಯೂ ಸಹ ಜನರಿಂದ ಮನ್ನಣೆ ಗಳಿಸಿತ್ತು.

ಲಾಪತಾ ಲೇಡಿಸ್‌ ಚಿತ್ರವು ಸಿನಿಮಾ ಮಹಿಳೆಯರ ಸಬಲೀಕರಣದ ಕುರಿತು ಇರುವ ಕಥೆಯಾಗಿದೆ. ಇದನ್ನು ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನ ಮಾಡಿದ್ದು, ಅಧಿಕೃತವಾಗಿ ಚೈನ್ನೈನಲ್ಲಿ ʻಭಾರತ ಫಿಲ್ಮ್‌ ಫೆಡರೇಶನ್‌ʼ ಸದಸ್ಯರು ಘೋಷಿಸಿದ್ದಾರೆ.

ಈ ಚಿತ್ರದಲ್ಲಿ ನಿಶಾಂತಿ ಗೋಯಾಲ್‌, ಪ್ರತಿಭಾ ರಾಂತಾ, ಸ್ಪರ್ಶ್‌ ಶ್ರೀವಾಸ್ತವ, ಚಾಯಾ ಕದಮ್‌ ಹಾಗೂ ರವಿ ಕಿಶನ್‌ ನಟಿಸಿದ್ದಾರೆ.

ನಿರ್ದೇಶಕ ಕಿರಣ್‌ ರಾವ್‌ ಅವರು ದೊಡ್ಡ ಕನಸಾಗಿರುವ ಈ ಚಿತ್ರವೂ ಆಸ್ಕರ್‌ ಪ್ರಶಸ್ತಿಯನ್ನು ಗೆಲ್ಲಬೇಕೆಂಬುದೇ ಅವರ ಆಶಯವಾಗಿತ್ತು. ಈ ಸಿನಿಮಾ ಮೊದಲು ಟೊರೆಂಟೋ ಇಂಟರ್‌ನ್ಯಾಷನಲ್‌ ಫೆಸ್ಟಿವಲ್‌ನಲ್ಲಿ ಪ್ರಸಾರವಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

2 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

2 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

2 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

2 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

2 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

3 hours ago