ಮನರಂಜನೆ

Oscar Award2025: ಆಸ್ಕರ್‌ ಅಂಗಳಕ್ಕೆ ಧುಮುಕಿದ ʼಲಾಪತಾ ಲೇಡಿಸ್‌ʼ

ಭಾರತದಿಂದ ಅಧಿಕೃತವಾಗಿ ಆಯ್ಕೆ

ನವದೆಹಲಿ: ಆಸ್ಕರ್‌ ಆವಾರ್ಡ್‌ ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕಿರಣ್‌ ರಾವ್‌ ಅವರ ಚೊಚ್ಚಲ ನಿರ್ದೇಶನದ ಬಾಲಿವುಡ್‌ ಸಿನಿಮಾ ಲಾಪತಾ ಲೇಡಿಸ್‌ ಚಿತ್ರ 2025ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.

ಈ ಚಲನಚಿತ್ರವನ್ನು ನಟ ಅಮಿರ್‌ ಖಾನ್‌ ನಿರ್ಮಾಣ ಮಾಡಿದ್ದಾರೆ. ವರ್ಷದ ಪ್ರಾರಂಭದಲ್ಲಿ ಬಿಡುಗಡೆಗೊಂಡ ನಂತರ ಎಲ್ಲರಿಂದ ಮೆಚ್ಚುಗೆ ಪಡೆದ ಈ ಸಿನಿಮಾ, ಒಟಿಟಿಯಲ್ಲಿಯೂ ಸಹ ಜನರಿಂದ ಮನ್ನಣೆ ಗಳಿಸಿತ್ತು.

ಲಾಪತಾ ಲೇಡಿಸ್‌ ಚಿತ್ರವು ಸಿನಿಮಾ ಮಹಿಳೆಯರ ಸಬಲೀಕರಣದ ಕುರಿತು ಇರುವ ಕಥೆಯಾಗಿದೆ. ಇದನ್ನು ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನ ಮಾಡಿದ್ದು, ಅಧಿಕೃತವಾಗಿ ಚೈನ್ನೈನಲ್ಲಿ ʻಭಾರತ ಫಿಲ್ಮ್‌ ಫೆಡರೇಶನ್‌ʼ ಸದಸ್ಯರು ಘೋಷಿಸಿದ್ದಾರೆ.

ಈ ಚಿತ್ರದಲ್ಲಿ ನಿಶಾಂತಿ ಗೋಯಾಲ್‌, ಪ್ರತಿಭಾ ರಾಂತಾ, ಸ್ಪರ್ಶ್‌ ಶ್ರೀವಾಸ್ತವ, ಚಾಯಾ ಕದಮ್‌ ಹಾಗೂ ರವಿ ಕಿಶನ್‌ ನಟಿಸಿದ್ದಾರೆ.

ನಿರ್ದೇಶಕ ಕಿರಣ್‌ ರಾವ್‌ ಅವರು ದೊಡ್ಡ ಕನಸಾಗಿರುವ ಈ ಚಿತ್ರವೂ ಆಸ್ಕರ್‌ ಪ್ರಶಸ್ತಿಯನ್ನು ಗೆಲ್ಲಬೇಕೆಂಬುದೇ ಅವರ ಆಶಯವಾಗಿತ್ತು. ಈ ಸಿನಿಮಾ ಮೊದಲು ಟೊರೆಂಟೋ ಇಂಟರ್‌ನ್ಯಾಷನಲ್‌ ಫೆಸ್ಟಿವಲ್‌ನಲ್ಲಿ ಪ್ರಸಾರವಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago