ಮನರಂಜನೆ

Oscar Award2025: ಆಸ್ಕರ್‌ ಅಂಗಳಕ್ಕೆ ಧುಮುಕಿದ ʼಲಾಪತಾ ಲೇಡಿಸ್‌ʼ

ಭಾರತದಿಂದ ಅಧಿಕೃತವಾಗಿ ಆಯ್ಕೆ

ನವದೆಹಲಿ: ಆಸ್ಕರ್‌ ಆವಾರ್ಡ್‌ ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕಿರಣ್‌ ರಾವ್‌ ಅವರ ಚೊಚ್ಚಲ ನಿರ್ದೇಶನದ ಬಾಲಿವುಡ್‌ ಸಿನಿಮಾ ಲಾಪತಾ ಲೇಡಿಸ್‌ ಚಿತ್ರ 2025ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.

ಈ ಚಲನಚಿತ್ರವನ್ನು ನಟ ಅಮಿರ್‌ ಖಾನ್‌ ನಿರ್ಮಾಣ ಮಾಡಿದ್ದಾರೆ. ವರ್ಷದ ಪ್ರಾರಂಭದಲ್ಲಿ ಬಿಡುಗಡೆಗೊಂಡ ನಂತರ ಎಲ್ಲರಿಂದ ಮೆಚ್ಚುಗೆ ಪಡೆದ ಈ ಸಿನಿಮಾ, ಒಟಿಟಿಯಲ್ಲಿಯೂ ಸಹ ಜನರಿಂದ ಮನ್ನಣೆ ಗಳಿಸಿತ್ತು.

ಲಾಪತಾ ಲೇಡಿಸ್‌ ಚಿತ್ರವು ಸಿನಿಮಾ ಮಹಿಳೆಯರ ಸಬಲೀಕರಣದ ಕುರಿತು ಇರುವ ಕಥೆಯಾಗಿದೆ. ಇದನ್ನು ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನ ಮಾಡಿದ್ದು, ಅಧಿಕೃತವಾಗಿ ಚೈನ್ನೈನಲ್ಲಿ ʻಭಾರತ ಫಿಲ್ಮ್‌ ಫೆಡರೇಶನ್‌ʼ ಸದಸ್ಯರು ಘೋಷಿಸಿದ್ದಾರೆ.

ಈ ಚಿತ್ರದಲ್ಲಿ ನಿಶಾಂತಿ ಗೋಯಾಲ್‌, ಪ್ರತಿಭಾ ರಾಂತಾ, ಸ್ಪರ್ಶ್‌ ಶ್ರೀವಾಸ್ತವ, ಚಾಯಾ ಕದಮ್‌ ಹಾಗೂ ರವಿ ಕಿಶನ್‌ ನಟಿಸಿದ್ದಾರೆ.

ನಿರ್ದೇಶಕ ಕಿರಣ್‌ ರಾವ್‌ ಅವರು ದೊಡ್ಡ ಕನಸಾಗಿರುವ ಈ ಚಿತ್ರವೂ ಆಸ್ಕರ್‌ ಪ್ರಶಸ್ತಿಯನ್ನು ಗೆಲ್ಲಬೇಕೆಂಬುದೇ ಅವರ ಆಶಯವಾಗಿತ್ತು. ಈ ಸಿನಿಮಾ ಮೊದಲು ಟೊರೆಂಟೋ ಇಂಟರ್‌ನ್ಯಾಷನಲ್‌ ಫೆಸ್ಟಿವಲ್‌ನಲ್ಲಿ ಪ್ರಸಾರವಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago