ಮನರಂಜನೆ

ನಮ್ಮಪ್ಪ ಪಕ್ಕಾ ವ್ಯವಹಾರಸ್ಥ; ಕೆ. ಮಂಜು ಕಾಲೆಳೆದ ಮಗ …

ಶ್ರೇಯಸ್‍ ಮಂಜು ಅಭಿನಯದ ಮೂರನೆಯ ಚಿತ್ರ ‘ವಿಷ್ಣು ಪ್ರಿಯಾ’ ಕೊನೆಗೂ ಬಿಡುಗಡೆಯಾಗುತ್ತಿದೆ. ಕಳೆದ ದಶಕದ ಕೊನೆಯಲ್ಲಿ ಪ್ರಾರಂಭವಾದ ಈ ಚಿತ್ರ, ಕುಂಟುತ್ತಾ ಸಾಗಿ ಈಗ ಕೊನೆಗೂ ಫೆ. 21ರಂದು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಅದಕ್ಕೂ ಮೊದಲು, ಇತ್ತೀಚೆಗೆ ಈ ಚಿತ್ರದ ‘ಏಳು ಗಿರಿಗಳ ಏಳು ಕಡಲಿನ …’ ಎಂಬ ಪ್ರೇಮಗೀತೆ ಬಿಡುಗಡೆ ಮಾಡಲಾಗಿದೆ.. ಈ ಕಾರ್ಯಕ್ರಮದಲ್ಲಿ ಶ್ರೀಮುರುಳಿ, ಸಪ್ತಮಿ ಗೌಡ, ನಿರ್ಮಾಪಕ ರಮೇಶ್ ರೆಡ್ಡಿ, ಗೀತ ಸಾಹಿತಿ ಕವಿರಾಜ್‍ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರಕ್ಕೆ ಶುಭ ಹಾರೈಸಿದರು.

‘ವಿಷ್ಣು ಪ್ರಿಯಾ’ ಚಿತ್ರಕ್ಕೆ ಮಲಯಾಳಂ ನಿರ್ದೇಶಕ ವಿ.ಕೆ. ಪ್ರಕಾಶ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ‘ಐದೊಂದ್ಲ ಐದು’ ಚಿತ್ರವನ್ನು ನಿರ್ದೇಶಿಸಿದ್ದ ಪ್ರಕಾಶ್‍ ಅವರಿಗೆ ‘ವಿಷ್ಣು ಪ್ರಿಯಾ’ ಎರಡನೇ ಚಿತ್ರ.

ಶ್ರೇಯಸ್ ಮಂಜು ಮಾತನಾಡಿ, ‘ನನಗೆ ಹಣ ಮುಖ್ಯವಲ್ಲ, ಕಲೆ ಮುಖ್ಯ. ಹಣ ಮುಖ್ಯವಾಗಿದ್ದರೆ ಪಬ್ ಮಾಡಿಕೊಂಡು ಹಣ ಮಾಡಿಕೊಂಡಿರುತ್ತಿದೆ. ಕಷ್ಟಪಟ್ಟು ಬೆಳೆದು ಮುಂದೆ ಬರಬೇಕು ಎನ್ನುವ ಆಸೆಯಿಂದ ಈ ಕ್ಷೇತ್ರಕ್ಕೆ ಬಂದೆ. ಮನೆಯಲ್ಲಿ ನಾನು ನಿರ್ಮಾಪಕ ಕೆ. ಮಂಜು ಅಪ್ಪ-ಮಗ. ಆದರೆ, ಮನೆಯಾಚೆ ಅವರೊಬ್ಬ ಪಕ್ಕಾ ವ್ಯವಹಾರಸ್ಥ. ಎಲ್ಲವನ್ನೂ ಅಳೆದು-ತೂಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆ ಕಾರಣಕ್ಕಾಗಿಯೇ ಚಿತ್ರ ವಿಳಂಬವಾಯಿತು’ ಎಂದು ಹೇಳಿದರು.

ನಟಿ ಪ್ರಿಯಾ ವಾರಿಯರ್ ಮಾತನಾಡಿ, ‘ಇದು ಕನ್ನಡದಲ್ಲಿ ಮೊದಲ ಚಿತ್ರ, ಆರಂಭದಲ್ಲಿ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಹೇಳಿದ್ದೆ. ಒಂದಷ್ಟು ವರ್ಷ ಗ್ಯಾಪ್ ಆಗಿರುವುದರಿಂದ, ಕನ್ನಡ ಮರೆತು ಹೋಗಿದೆ. ಮುಂದಿನ ದಿನಗಳಲ್ಲಿ ಖಂಡಿತಾ ಕನ್ನಡದಲ್ಲಿ ಮಾತನಾಡುತ್ತೇನೆ. ‘ವಿಷ್ಣು ಪ್ರಿಯಾ’ದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆ. ನಟ ಶ್ರೇಯಸ್ ಜೊತೆ ಸಾಕಷ್ಟು ಕಲಿತಿದ್ದೇನೆ’ ಎಂದರು.

ಪ್ರೀತಿಗಾಗಿ ಏನು ಬೇಕಾದರೂ ಮಾಡಲು ರೆಡಿಯಾಗುವ ಯುವಕ‌ನ ಜೀವನದಲ್ಲಿ ಏನೇನೆಲ್ಲಾ ನಡೆಯುತ್ತದೆ ಎಂದು ಹೇಳುವ ‘ವಿಷ್ಣು ಪ್ರಿಯಾ’ ಚಿತ್ರದಲ್ಲಿ ನಾಯಕನ ತಂದೆಯಾಗಿ ಅಚ್ಯುತ್ ಕುಮಾರ್ ಹಾಗೂ ನಾಯಕಿಯ ತಂದೆಯಾಗಿ ಸುಚೇಂದ್ರ ಪ್ರಸಾದ್ ಅಭಿನಯಿಸಿದ್ದಾರೆ. ನಿರ್ದೇಶಕ ರವಿ ಶ್ರೀವತ್ಸ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಿನೋದ್ ಭಾರತಿ ಛಾಯಾಗ್ರಹಣ, ಗೋಪಿಸುಂದರ್‍ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

3 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

3 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

4 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

4 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

4 hours ago