ಮನರಂಜನೆ

ಹಾರರ್ ಜೊತೆಗೆ ಅಲೌಕಿಕ ವಿಷಯ ಸೇರಿಸಿ ‘ಕಮರೊ2’ಗೆ ಹೊರಟ ಪರಮೇಶ್‍

ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್‍. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದು, ಚಿತ್ರ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

‘ಕಮರೊ2’ ಚಿತ್ರವನ್ನು ಕನಸು ಪಿಕ್ಚರ್ಸ್‍ ಸಂಸ್ಥೆಯಡಿ ಪವನ್‍ ಗೌಡ ನಿರ್ಮಿಸಿದ್ದು, ಪರಮೇಶ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ, ಸ್ವಾಮಿನಾಥನ್‍, ರಜನಿ ಭಾರದ್ವಾಜ್‍, ರಾಘವೇಂದ್ರ ರಾಜಕುಮಾರ್, ಅಶ್ವತ್ಥ್ ನೀನಾಸಂ, ನಾಗೇಂದ್ರ ಅರಸ್‍ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ನಿರ್ದೇಶಕ ಪರಮೇಶ್, ‘ನಾನು ಈ ಹಿಂದೆ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಪ್ಯಾರಾ ನರ್ಮಲ್ ಜಾನರ್‌ನ ‘ಕಮರೊಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದೆ. ಅದು ನನ್ನ ತಂತ್ರಜ್ಞಾನದ ಅನುಭವಕ್ಕಾಗಿ ಮಾಡಿದ ಚಿತ್ರ. ಅದರಲ್ಲಿ ಯಾವುದೇ ಪರಿಚಿತ ಕಲಾವಿದರು ಅಭಿನಯಿಸಿರಲಿಲ್ಲ. ಆದರೂ ಆ ಚಿತ್ರ ಮೆಚ್ಚುಗೆ ಪಡೆದಿತ್ತು. ಅದರ ಮುಂದುವರೆದ ಭಾಗವಾಗಿ ‘ಕಮರೊ2’ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ. ಇದು ಸಹ ಹಾರಾರ್ ಕಥೆಯೊಂದಿಗೆ ಅತೀಂದ್ರೀಯ ಶಕ್ತಿಗಳ ಕುರಿತಾದ ಚಿತ್ರಕ್ಕೆ ಮಂಗಳೂರಿನ ಉಡುಪಿ, ಚಿಕ್ಕ ಮಂಗಳೂರು ಸುತ್ತಮುತ್ತಲ್ಲಿನಲ್ಲಿ ಚಿತ್ರೀಕರಣ ಆಗಿದೆ’ ಎಂದರು.

ಈ ಚಿತ್ರದ ಕಥೆ ಕೇಳಿದ ಪವನ್ ಗೌಡ ನಿರ್ಮಾಣಕ್ಕೆ ಮುಂದಾದರಂತೆ. ‘ಪ್ರಿಯಾಂಕಾ ಉಪೇಂದ್ರ ಇದುವರೆಗೂ ಮಾಡಿರದ ಪಾತ್ರದಲ್ಲಿ ನಟಿಸಿದ್ದಾರೆ. ಅವರಿಗೆ ಕಥೆ ಹೇಳುವಾಗ ಒಪ್ಪಿಕೊಳ್ಳುತ್ತಾರೊ? ಇಲ್ಲವೊ? ಎಂಬ ಭಯವಿತ್ತು. ಆದರೆ, ಕಥೆ ಕೇಳಿದ ತಕ್ಷಣ ಒಪ್ಪಿಕೊಂಡರು. ಕನ್ನಡದ ‘ಮಿಥುನ ರಾಶಿ’ ಸೇರಿದಂತೆ ತಮಿಳಿನ ಧಾರಾವಾಹಿಗಳಲ್ಲೂ ನಟಿಸಿ ಜನಪ್ರಿಯರಾಗಿರುವ ಅನಂತಸ್ವಾಮಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಸಹ ಇದ್ದಾರೆ. ಈ ಚಿತ್ರ ಪ್ರೇಕ್ಷಕರನ್ನು ಕುರ್ಚಿ ತುದಿಯಲ್ಲಿ ಕೂರಿಸುವುದರ ಜೊತೆಗೆ ಕೊಟ್ಟ ದುಡ್ಡಿಗೆ ಮೋಸ ಮಾಡದಂತೆ ರೂಪುಗೊಂಡಿದೆ’ ಎಂದರು.

ಪ್ರಿಯಾಂಕ ಉಪೇಂದ್ರಗೆ ಪರಮೇಶ್ ಹೇಳಿದ ಕಥೆ ಬಹಳ ಇಷ್ಟವಾಯಿತಂತೆ. ‘ನನ್ನ ಪಾತ್ರ ಚೆನ್ನಾಗಿದೆ. ಗುಟಮಟ್ಟದಲ್ಲಂತೂ ಯಾವುದೇ ಭಾಷೆಗಳ ಚಿತ್ರಗಳಿಗೂ ಕಡಿಮೆ ಇಲ್ಲದಂತೆ ಬಹಳ ಉತ್ತಮಾವಾಗಿ ಚಿತ್ರಿಸಿದ್ದಾರೆ. ಇಂತಹ ಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರಬೇಕು’ ಎಂದರು.

‘ಕಮರೊ2’ ಚಿತ್ರಕ್ಕೆ ಎ.ಟಿ. ರವೀಶ್‍ ಸಂಗೀತ, ಪ್ರಜ್ವಲ್‍ ಗೌಡ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

7 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago