ಮನರಂಜನೆ

ಹಾರರ್ ಜೊತೆಗೆ ಅಲೌಕಿಕ ವಿಷಯ ಸೇರಿಸಿ ‘ಕಮರೊ2’ಗೆ ಹೊರಟ ಪರಮೇಶ್‍

ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್‍. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದು, ಚಿತ್ರ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

‘ಕಮರೊ2’ ಚಿತ್ರವನ್ನು ಕನಸು ಪಿಕ್ಚರ್ಸ್‍ ಸಂಸ್ಥೆಯಡಿ ಪವನ್‍ ಗೌಡ ನಿರ್ಮಿಸಿದ್ದು, ಪರಮೇಶ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ, ಸ್ವಾಮಿನಾಥನ್‍, ರಜನಿ ಭಾರದ್ವಾಜ್‍, ರಾಘವೇಂದ್ರ ರಾಜಕುಮಾರ್, ಅಶ್ವತ್ಥ್ ನೀನಾಸಂ, ನಾಗೇಂದ್ರ ಅರಸ್‍ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ನಿರ್ದೇಶಕ ಪರಮೇಶ್, ‘ನಾನು ಈ ಹಿಂದೆ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಪ್ಯಾರಾ ನರ್ಮಲ್ ಜಾನರ್‌ನ ‘ಕಮರೊಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದೆ. ಅದು ನನ್ನ ತಂತ್ರಜ್ಞಾನದ ಅನುಭವಕ್ಕಾಗಿ ಮಾಡಿದ ಚಿತ್ರ. ಅದರಲ್ಲಿ ಯಾವುದೇ ಪರಿಚಿತ ಕಲಾವಿದರು ಅಭಿನಯಿಸಿರಲಿಲ್ಲ. ಆದರೂ ಆ ಚಿತ್ರ ಮೆಚ್ಚುಗೆ ಪಡೆದಿತ್ತು. ಅದರ ಮುಂದುವರೆದ ಭಾಗವಾಗಿ ‘ಕಮರೊ2’ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ. ಇದು ಸಹ ಹಾರಾರ್ ಕಥೆಯೊಂದಿಗೆ ಅತೀಂದ್ರೀಯ ಶಕ್ತಿಗಳ ಕುರಿತಾದ ಚಿತ್ರಕ್ಕೆ ಮಂಗಳೂರಿನ ಉಡುಪಿ, ಚಿಕ್ಕ ಮಂಗಳೂರು ಸುತ್ತಮುತ್ತಲ್ಲಿನಲ್ಲಿ ಚಿತ್ರೀಕರಣ ಆಗಿದೆ’ ಎಂದರು.

ಈ ಚಿತ್ರದ ಕಥೆ ಕೇಳಿದ ಪವನ್ ಗೌಡ ನಿರ್ಮಾಣಕ್ಕೆ ಮುಂದಾದರಂತೆ. ‘ಪ್ರಿಯಾಂಕಾ ಉಪೇಂದ್ರ ಇದುವರೆಗೂ ಮಾಡಿರದ ಪಾತ್ರದಲ್ಲಿ ನಟಿಸಿದ್ದಾರೆ. ಅವರಿಗೆ ಕಥೆ ಹೇಳುವಾಗ ಒಪ್ಪಿಕೊಳ್ಳುತ್ತಾರೊ? ಇಲ್ಲವೊ? ಎಂಬ ಭಯವಿತ್ತು. ಆದರೆ, ಕಥೆ ಕೇಳಿದ ತಕ್ಷಣ ಒಪ್ಪಿಕೊಂಡರು. ಕನ್ನಡದ ‘ಮಿಥುನ ರಾಶಿ’ ಸೇರಿದಂತೆ ತಮಿಳಿನ ಧಾರಾವಾಹಿಗಳಲ್ಲೂ ನಟಿಸಿ ಜನಪ್ರಿಯರಾಗಿರುವ ಅನಂತಸ್ವಾಮಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಸಹ ಇದ್ದಾರೆ. ಈ ಚಿತ್ರ ಪ್ರೇಕ್ಷಕರನ್ನು ಕುರ್ಚಿ ತುದಿಯಲ್ಲಿ ಕೂರಿಸುವುದರ ಜೊತೆಗೆ ಕೊಟ್ಟ ದುಡ್ಡಿಗೆ ಮೋಸ ಮಾಡದಂತೆ ರೂಪುಗೊಂಡಿದೆ’ ಎಂದರು.

ಪ್ರಿಯಾಂಕ ಉಪೇಂದ್ರಗೆ ಪರಮೇಶ್ ಹೇಳಿದ ಕಥೆ ಬಹಳ ಇಷ್ಟವಾಯಿತಂತೆ. ‘ನನ್ನ ಪಾತ್ರ ಚೆನ್ನಾಗಿದೆ. ಗುಟಮಟ್ಟದಲ್ಲಂತೂ ಯಾವುದೇ ಭಾಷೆಗಳ ಚಿತ್ರಗಳಿಗೂ ಕಡಿಮೆ ಇಲ್ಲದಂತೆ ಬಹಳ ಉತ್ತಮಾವಾಗಿ ಚಿತ್ರಿಸಿದ್ದಾರೆ. ಇಂತಹ ಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರಬೇಕು’ ಎಂದರು.

‘ಕಮರೊ2’ ಚಿತ್ರಕ್ಕೆ ಎ.ಟಿ. ರವೀಶ್‍ ಸಂಗೀತ, ಪ್ರಜ್ವಲ್‍ ಗೌಡ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

3 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

4 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago