ಮನರಂಜನೆ

ಹಾರರ್ ಜೊತೆಗೆ ಅಲೌಕಿಕ ವಿಷಯ ಸೇರಿಸಿ ‘ಕಮರೊ2’ಗೆ ಹೊರಟ ಪರಮೇಶ್‍

ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್‍. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದು, ಚಿತ್ರ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

‘ಕಮರೊ2’ ಚಿತ್ರವನ್ನು ಕನಸು ಪಿಕ್ಚರ್ಸ್‍ ಸಂಸ್ಥೆಯಡಿ ಪವನ್‍ ಗೌಡ ನಿರ್ಮಿಸಿದ್ದು, ಪರಮೇಶ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ, ಸ್ವಾಮಿನಾಥನ್‍, ರಜನಿ ಭಾರದ್ವಾಜ್‍, ರಾಘವೇಂದ್ರ ರಾಜಕುಮಾರ್, ಅಶ್ವತ್ಥ್ ನೀನಾಸಂ, ನಾಗೇಂದ್ರ ಅರಸ್‍ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ನಿರ್ದೇಶಕ ಪರಮೇಶ್, ‘ನಾನು ಈ ಹಿಂದೆ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಪ್ಯಾರಾ ನರ್ಮಲ್ ಜಾನರ್‌ನ ‘ಕಮರೊಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದೆ. ಅದು ನನ್ನ ತಂತ್ರಜ್ಞಾನದ ಅನುಭವಕ್ಕಾಗಿ ಮಾಡಿದ ಚಿತ್ರ. ಅದರಲ್ಲಿ ಯಾವುದೇ ಪರಿಚಿತ ಕಲಾವಿದರು ಅಭಿನಯಿಸಿರಲಿಲ್ಲ. ಆದರೂ ಆ ಚಿತ್ರ ಮೆಚ್ಚುಗೆ ಪಡೆದಿತ್ತು. ಅದರ ಮುಂದುವರೆದ ಭಾಗವಾಗಿ ‘ಕಮರೊ2’ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ. ಇದು ಸಹ ಹಾರಾರ್ ಕಥೆಯೊಂದಿಗೆ ಅತೀಂದ್ರೀಯ ಶಕ್ತಿಗಳ ಕುರಿತಾದ ಚಿತ್ರಕ್ಕೆ ಮಂಗಳೂರಿನ ಉಡುಪಿ, ಚಿಕ್ಕ ಮಂಗಳೂರು ಸುತ್ತಮುತ್ತಲ್ಲಿನಲ್ಲಿ ಚಿತ್ರೀಕರಣ ಆಗಿದೆ’ ಎಂದರು.

ಈ ಚಿತ್ರದ ಕಥೆ ಕೇಳಿದ ಪವನ್ ಗೌಡ ನಿರ್ಮಾಣಕ್ಕೆ ಮುಂದಾದರಂತೆ. ‘ಪ್ರಿಯಾಂಕಾ ಉಪೇಂದ್ರ ಇದುವರೆಗೂ ಮಾಡಿರದ ಪಾತ್ರದಲ್ಲಿ ನಟಿಸಿದ್ದಾರೆ. ಅವರಿಗೆ ಕಥೆ ಹೇಳುವಾಗ ಒಪ್ಪಿಕೊಳ್ಳುತ್ತಾರೊ? ಇಲ್ಲವೊ? ಎಂಬ ಭಯವಿತ್ತು. ಆದರೆ, ಕಥೆ ಕೇಳಿದ ತಕ್ಷಣ ಒಪ್ಪಿಕೊಂಡರು. ಕನ್ನಡದ ‘ಮಿಥುನ ರಾಶಿ’ ಸೇರಿದಂತೆ ತಮಿಳಿನ ಧಾರಾವಾಹಿಗಳಲ್ಲೂ ನಟಿಸಿ ಜನಪ್ರಿಯರಾಗಿರುವ ಅನಂತಸ್ವಾಮಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಸಹ ಇದ್ದಾರೆ. ಈ ಚಿತ್ರ ಪ್ರೇಕ್ಷಕರನ್ನು ಕುರ್ಚಿ ತುದಿಯಲ್ಲಿ ಕೂರಿಸುವುದರ ಜೊತೆಗೆ ಕೊಟ್ಟ ದುಡ್ಡಿಗೆ ಮೋಸ ಮಾಡದಂತೆ ರೂಪುಗೊಂಡಿದೆ’ ಎಂದರು.

ಪ್ರಿಯಾಂಕ ಉಪೇಂದ್ರಗೆ ಪರಮೇಶ್ ಹೇಳಿದ ಕಥೆ ಬಹಳ ಇಷ್ಟವಾಯಿತಂತೆ. ‘ನನ್ನ ಪಾತ್ರ ಚೆನ್ನಾಗಿದೆ. ಗುಟಮಟ್ಟದಲ್ಲಂತೂ ಯಾವುದೇ ಭಾಷೆಗಳ ಚಿತ್ರಗಳಿಗೂ ಕಡಿಮೆ ಇಲ್ಲದಂತೆ ಬಹಳ ಉತ್ತಮಾವಾಗಿ ಚಿತ್ರಿಸಿದ್ದಾರೆ. ಇಂತಹ ಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರಬೇಕು’ ಎಂದರು.

‘ಕಮರೊ2’ ಚಿತ್ರಕ್ಕೆ ಎ.ಟಿ. ರವೀಶ್‍ ಸಂಗೀತ, ಪ್ರಜ್ವಲ್‍ ಗೌಡ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

8 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago